ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಅಹಮದಾಬಾದ್ನಲ್ಲಿ ಗುರುವಾರ ನಡೆದ ಏರ್ ಇಂಡಿಯಾ ದುರಂತದಲ್ಲಿ ಮೃತಪಟ್ಟ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಸಂತಾಪ ಸೂಚಿಸಿದ್ದಾರೆ.
"ವಿಮಾನ ಅಪಘಾತದಲ್ಲಿ ಬಲಿಯಾದ ವಿಜಯ್ ರೂಪಾನಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ರಾಜ್ಯಸಭಾ ಸಂಸದರಾಗಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು. ನಾವು ಕೆಲವು ಸಂದರ್ಭಗಳಲ್ಲಿ ಎರಡೂ ರಾಜ್ಯ ಬಗ್ಗೆ ಚರ್ಚೆ ನಡೆಸಿದ್ದೇವೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು" ಎಂದು ಪೋಸ್ಟ್ ಮಾಡಿದ್ದಾರೆ.
ಸರ್ದಾರ್ ವಲ್ಲಭಬಾಯ್ ಪಟೇಲ್ ವಿಮಾನ ನಿಲ್ದಾಣದಲ್ಲಿ ಗುರುವಾರ(ಜೂ.12) ನಡೆದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಂಡು 241 ಪ್ರಯಾಣಿಕರು ಮೃತಪಟ್ಟಿದ್ದು ಒಬ್ಬ ಪ್ರಯಾಣಿಕ ಮಾತ್ರ ಬದುಕುಳಿದಿದ್ದ.
Update: 2025-06-13 10:03 GMT