ವಿಮಾನ ದುರಂತ: ಕೇಂದ್ರ ನಾಗರಿಕ ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ್ ಖಂಡ್ರೆ ಒತ್ತಾಯ
ಅಹಮದಾಬಾದ್ನಲ್ಲಿ ಗುರುವಾರ ನಡೆದ ಏರ್ ಇಂಡಿಯಾ ದುರಂತದ ಹೊಣೆ ಹೊತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್ ನಾಯ್ಡು ರಾಜೀನಾಮೆ ನೀಡಬೇಕೆಂದು ರಾಜ್ಯ ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.
ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ವೈದ್ಯಕೀಯ ವಸತಿ ನಿಲಯಕ್ಕೆ ಅಪ್ಪಳಿಸಿ ಸ್ಪೋಟಗೊಂಡಿತ್ತು. ಈ ದುರಂತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಮಂದಿ ಮೃತಪಟ್ಟಿದ್ದರು.
Update: 2025-06-13 13:39 GMT