ಏರ್‌ ಇಂಡಿಯಾ ದುರಂತ: ಘಟನೆಯಿಂದ ತೀವ್ರ ದುಃಖವಾಗಿದೆ: ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್

"ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ಪ್ರಯಾಣಿಕ ವಿಮಾನ ಅಪಘಾತದ ಘಟನೆಯಿಂದ ನನಗೆ ತೀವ್ರ ದುಃಖವಾಗಿದೆ. ದುರಂತ ನಡೆದ ತಕ್ಷಣ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಮತ್ತು ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣದ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗೆ ಕರೆದೊಯ್ಯಲು ಹಸಿರು ಕಾರಿಡಾರ್ ವ್ಯವಸ್ಥೆ ಮಾಡಲು ಮತ್ತು ಆದ್ಯತೆಯ ಆಧಾರದ ಮೇಲೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ನಾನು ಸೂಚಿಸಿದ್ದೇನೆ" ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

Update: 2025-06-12 10:26 GMT

Linked news