ಮುಂಬೈನಲ್ಲಿ ಹೈ ಅಲರ್ಟ್: ನಗರಾದ್ಯಂತ 'ನಾಕಾಬಂದಿ ದೆಹಲಿಯ... ... ದೆಹಲಿಯ ಕೆಂಪುಕೋಟೆ ಬಳಿ ಕಾರಿನಲ್ಲಿ ಸ್ಫೋಟ: ಎಂಟು ಸಾವು; 24 ಮಂದಿಗೆ ಗಾಯ

ಮುಂಬೈನಲ್ಲಿ ಹೈ ಅಲರ್ಟ್: ನಗರಾದ್ಯಂತ 'ನಾಕಾಬಂದಿ

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಫೋಟದ ಬೆನ್ನಲ್ಲೇ, ಭಾರತದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಬೈ ಪೊಲೀಸರು ನಗರಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದಾರೆ.​ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದ್ದು, ನಗರದಾದ್ಯಂತ 'ನಾಕಾಬಂದಿ' (ಚೆಕ್‌ಪೋಸ್ಟ್‌) ಗಳನ್ನು ಸ್ಥಾಪಿಸಲಾಗಿದೆ. ಸೂಕ್ಷ್ಮ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲಾಗಿದ್ದು, ಅನುಮಾನಾಸ್ಪದದ ವ್ಯಕ್ತಿಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಗುಪ್ತಚರ ಜಾಲವನ್ನು ಸಕ್ರಿಯಗೊಳಿಸಿ, ನೆಲಮಟ್ಟದ ಮಾಹಿತಿಯನ್ನು ಸಂಗ್ರಹಿಸುವಂತೆಯೂ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ದೆಹಲಿ ಘಟನೆಯ ಹಿನ್ನೆಲೆಯಲ್ಲಿ, ಮುಂಬೈನ ಪ್ರಮುಖ ಸ್ಥಳಗಳಾದ ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು, ಮಾರುಕಟ್ಟೆಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ಭದ್ರತೆಯನ್ನು ದ್ವಿಗುಣಗೊಳಿಸಲಾಗಿದೆ.

Update: 2025-11-10 14:46 GMT

Linked news