ಹೈಕಮಾಂಡ್ ನಿರ್ಧಾರದ ಕುರಿತು ಸಚಿವರ ಅಭಿಪ್ರಾಯ ಕೇಳಿದ ಸಿಎಂ
ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಿರ್ಧಾರದ ಕುರಿತು ಆರಂಭದಲ್ಲೇ ಸಚಿವರಿಗೆ ಮಾಹಿತಿ ನೀಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಾತಿ ಗಣತಿಯ ಮರು ಸಮೀಕ್ಷೆ ಸೂಚಿಸಿದ್ದಾರೆ. ಈ ವಿಚಾರವಾಗಿ ಎಲ್ಲ ಸಚಿವರು ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ಸಿಎಂ ಮನವಿ ಮಾಡಿದರು.
ಜಾತಿಗಣತಿ ವರದಿ ಮರು ಸಮೀಕ್ಷೆ ಹೇಗೆ ನಡೆಸಬೇಕು. ವರದಿ ಕುರಿತು ಪರ-ವಿರೋಧದ ಅಭಿಪ್ರಾಯಗಳನ್ನು ಸರ್ಕಾರ ಯಾವ ರೀತಿ ಸ್ವೀಕರಿಸಬೇಕು ಎಂಬಿತ್ಯಾದಿ ವಿಚಾರಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
Update: 2025-06-12 06:25 GMT