ಸದನದಲ್ಲಿ ಬಿಜೆಪಿ-ಜೆಡಿಎಸ್ ಅವಧಿಯಲ್ಲಿನ ದುರಂತಗಳ ಪ್ರಸ್ತಾಪ, ಗದ್ದಲ
ಬಿಜೆಪಿ ಹಾಗೂ ಜೆಡಿಎಸ್ ಅವಧಿಯಲ್ಲಿ ನಡೆದಿರುವ ವಿವಿಧ ಪ್ರಕರಣಗಳನ್ನು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಚಾಮರಾಜನಗರ ಆಕ್ಸಿಜನ್ ದುರಂತ ನಡೆಯಿತು. ಆಗ 36 ಜನ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ಕೊಟ್ಟಿದ್ದರೆ ?, ಆಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಡಾ. ಸುಧಾಕರ್ ವಿರುದ್ಧ ನೀವು ಅಬೆಟರ್ ಎಂದು ಕರೆದ್ರಾ? ಎಂದು ಜೋರು ಧ್ವನಿಯಲ್ಲಿ ಶಾಸಕ ಸುರೇಶ್ ಕುಮಾರ್ನನ್ನು ಪ್ರಶ್ನಿಸಿದರು.
2006ರಲ್ಲಿ ವರನಟ ಡಾ. ರಾಜ್ ಕುಮಾರ್ ಮೃತಪಟ್ಟಾಗ ಸರ್ಕಾರ ಗೋಲಿಬಾರ್ ಮಾಡಿತು. ಆ ಸಂದರ್ಭದಲ್ಲಿ ಏಳು ಜನ ಮೃತಪಟ್ಟಿದ್ದರು. ಆಗ ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದರೆ? ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಆದಾಗ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೋಟ್ಟಿದ್ದರೆ ? ಎಂದರು.
ಸಿಎಂ ಮಾತಿಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
Update: 2025-08-22 06:51 GMT