ಗ್ಯಾರಂಟಿಗಳಿಂದ ತಲಾ ಆದಾಯ ಹೆಚ್ಚಳ
ರಾಜ್ಯ ಸರ್ಕಾರ ಜುಲೈವರೆಗೆ 96 ಸಾವಿರ ಕೋಟಿ ರೂ. ಗ್ಯಾರಂಟಿಗಳಿಗೆ ಖರ್ಚು ಮಾಡಿದೆ. ಸರ್ಕಾರದಲ್ಲಿ ಹಣ ಇಲ್ಲದಿದ್ದರೆ ಇಷ್ಟೊಂದು ಹಣ ಖರ್ಚು ಮಾಡಲಾಗುತ್ತಿತ್ತೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಸದನದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಡಿ 500ನೇ ಕೋಟಿ ಟಿಕೆಟ್ ಹಂಚಿದ್ದೇವೆ. ಗ್ಯಾರಂಟಿಗಳಿಂದ ತಲಾ ಆದಾಯದ ಹೆಚ್ಚಾಗಿದ್ದು, ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದೇವೆ ಎಂದು ತಿಳಿಸಿದರು.
Update: 2025-08-22 11:25 GMT