ನಾಡದೇವಿ ಚಾಮುಂಡಿಗೆ ಪುಪ್ಪಾರ್ಚನೆ ಮೂಲಕ ಮೈಸೂರು ದಸರಾಕ್ಕೆ ಚಾಲನೆ ನೀಡಿದ ಬಾನು ಮುಷ್ತಾಕ್

ನಾಡಹಬ್ಬ ದಸರಾವನ್ನು ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ಉದ್ಘಾಟಿಸಲಾಯಿತು. ಪ್ರತಿಷ್ಠಿತ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತ ಬರಹಗಾರ್ತಿ ಬಾನು ಮುಷ್ತಾಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಮತ್ತು ಸರ್ಕಾರದ ಇತರ ಗಣ್ಯರ ಸಮ್ಮುಖದಲ್ಲಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಕ್ಕೆ ಚಾಲನೆ ನೀಡಿದರು.ಇಂದಿನಿಂದ ಅಕ್ಟೋಬರ್ 2 ರವರೆಗೆ 11 ದಿನಗಳ ಕಾಲ ನಾಡಹಬ್ಬ ನಡೆಯಲಿದೆ. 

Update: 2025-09-22 05:01 GMT

Linked news