ಅಪಪ್ರಚಾರಕ್ಕೆ ಕಡಿವಾಣ ಹಾಕಿ: ಶಾಸಕ ಸುನೀಲ್ ಕುಮಾರ್
ನಾವು ಎಸ್ಐಟಿಗೆ ವಿರೋಧವಿಲ್ಲ, ಕೆಲವರು ಯೂಟ್ಯೂಬ್ ಬಳಸಿ ಅಪಪ್ರಚಾರ ನಡೆಸುತ್ತಿದ್ದಾರೆ ಆದ್ದರಿಂದ ಇದಕ್ಕೆ ಕಡಿವಾಣ ಹಾಕಬೇಕು ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ತಿಳಿಸಿದರು.
ಇದರ ಹಿಂದೆ ಒಬ್ಬ ಮುಸುಕುಧಾರಿ ಬದಲಾಗಿ ಹತ್ತಾರು ಜನ ಮುಸುಕು ಹಾಕಿ ಕೆಲಸ ಮಾಡುತ್ತಿದ್ದಾರೆ. ಆತನಿಗೆ ಹಣಕಾಸು ನೆರವು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಬೇಕು. ಧರ್ಮಸ್ಥಳಕ್ಕೆ ಕೆಸರು ಎರಚುವುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪ ಮಾಡಿದರು. ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷದ ಶಾಸಕರ ನಡುವೆ ವಾಗ್ವಾದ ನಡೆಯಿತು.
Update: 2025-08-18 12:50 GMT