ಪೊಲೀಸ್‌ ಅಧಿಕಾರಿಗಳ ಅಮಾನತು, ಸರ್ಕಾರದ ವಿರುದ್ಧ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್‌ ಆಕ್ರೋಶ

 

ಆರ್‌ಸಿಬಿ ಐಪಿಎಲ್ ವಿಜಯೋತ್ಸವದ ಸಮಾರಂಭದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿರುವುದಕ್ಕೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, 56 ಮಂದಿ ಗಾಯಗೊಂಡಿದ್ದರು. ಈ ಘಟನೆಯ ಹೊಣೆ ಹೊತ್ತು ಸರ್ಕಾರವು ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಆದರೆ, ಈ ದುರಂತಕ್ಕೆ ಸರ್ಕಾರವೇ ನೇರವಾಗಿ ಹೊಣೆಗಾರ ಎಂದು ಆರೋಪಿಸಿದ್ದಾರೆ.

Update: 2025-06-06 05:18 GMT

Linked news