ದುರಂತದ ಹೊಣೆ ಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಬಿ.ವೈ. ವಿಜಯೇಂದ್ರ

 

ಪೊಲೀಸರು ಅನುಮತಿ ಇಲ್ಲದಿದ್ದರೂ ವಿಧಾನಸೌಧದ ಮುಂದೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾರ್ಯಕ್ರಮ ಮಾಡಿದ್ದಾರೆ. ಅಲ್ಲಿ ಟ್ರೋಪಿಗೆ ಮುತ್ತು ಕೊಟ್ಟು ಡಿಕೆಶಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾಲ್ತುಳಿತದ ಪ್ರಕರಣದ ಆರೋಪಿ ನಂಬರ್ 1 ಸಿಎಂ ಸಿದ್ದರಾಮಯ್ಯ, ಆರೋಪಿ 2  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಆರೋಪಿಗಳನ್ನಾಗಿ ಮಾಡಬೇಕು. ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

Update: 2025-06-06 06:13 GMT

Linked news