ಮಧ್ಯಾಹ್ನ 3.10 ಕ್ಕೆ ಒಬ್ಬ ಮೃತಪಟ್ಟಿದ್ದರೂ ಕಾರ್ಯಕ್ರಮ ಮುಂದವರಿಸಿದ್ದ ಸರ್ಕಾರ ; ಎಚ್ಡಿಕೆ ಆರೋಪ
ಆರ್ಸಿಬಿ ವಿಜಯೋತ್ಸವ ಸಮಾರಂಭದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾರ್ಯಕ್ರಮದ ಆಯೋಜನೆಯಲ್ಲಿನ ಗೊಂದಲಗಳು, ಸರ್ಕಾರದ ನಿಧಾನಗತಿಯ ಪ್ರತಿಕ್ರಿಯೆ ಮತ್ತು ಸಚಿವರ ಮಕ್ಕಳ ಅಸಂಬದ್ಧ ವರ್ತನೆಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ.
ವಿಧಾನಸೌಧ ಮುಂದೆ ಆರ್ಸಿಬಿ ಆಟಗಾರರಿಗೆ ಸನ್ಮಾನ ಮಾಡಿದ ರೀತಿ ನೋಡಿದರೆ ಗೊತ್ತಾಗುತ್ತದೆ ಎಷ್ಟು ಗೊಂದಲ ಇದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದು ಕಾರ್ಯಕ್ರಮದ ಯೋಜನೆಯಲ್ಲಿ ಸ್ಪಷ್ಟತೆಯ ಕೊರತೆ ಮತ್ತು ಅವ್ಯವಸ್ಥೆ ಕಾಣುತ್ತದೆ. ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಗಳು ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಎರಡೂ ಕಡೆ ಕಾರ್ಯಕ್ರಮಕ್ಕೆ ಅವಕಾಶ ಕೋರಿದ್ದು, ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರವಾಗದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಪರೋಕ್ಷವಾಗಿ ಆರೋಪಿಸಿದ್ದಾರೆ.
ವೇದಿಕೆಯಲ್ಲಿ ಅಸಂಬದ್ಧ ವರ್ತನೆ
"ವೇದಿಕೆಯಲ್ಲಿ ಸಚಿವರ ಮಕ್ಕಳು, ನಂಟರಿಷ್ಟರು ಸೇರಿಕೊಂಡು ಕೂಲಿಂಗ್ ಗ್ಲಾಸ್ ಹಾಕಿಕೊಂಡಿದ್ದರು" ಎಂದು ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರದ ಪ್ರತಿನಿಧಿಗಳ ಕುಟುಂಬ ಸದಸ್ಯರ ಅಪ್ರಬುದ್ಧ ಮತ್ತು ಬೇಜವಾಬ್ದಾರಿಯುತ ವರ್ತನೆ ಎತ್ತಿ ತೋರಿಸುತ್ತದೆ. ಇದು ಸಾರ್ವಜನಿಕರನ್ನು ಕೆರಳಿಸಿದೆ.
ದುರಂತದ ಅರಿವಿದ್ದರೂ ಸಂಭ್ರಮಾಚರಣೆ
"3.10 ಕ್ಕೆ ಕಾಲ್ತುಳಿತಕ್ಕೆ ಒಬ್ಬ ಸತ್ತಿರುವುದು ಸರ್ಕಾರದ ಗಮನಕ್ಕೆ ಬಂದರೂ ಸರ್ಕಾರ ಸಂಭ್ರಮಾಚರಣೆ ಮುಂದುವರಿಸಿತ್ತು" . ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದ ನಂತರವೂ ಸರ್ಕಾರವು ಕಾರ್ಯಕ್ರಮವನ್ನು ಮುಂದುವರಿಸಿದೆ ಎಂದರೆ, ಇದು ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ,