ವರದಿ ಜಾರಿಗೆ ಸಿಎಂ ಆತುರಪಡುತ್ತಿಲ್ಲ; ಅಧ್ಯಯನಕ್ಕೆ ಸಮಯ ಕೇಳುವ ನಿರೀಕ್ಷೆ

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ ಕುರಿತಂತೆ ಇಂದು ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಜಾರಿಗೆ ಆತುರ ತೋರುವುದಿಲ್ಲ. ಬದಲಿಗೆ ವರದಿ ಅಧ್ಯಯನಕ್ಕೆ ಇನ್ನಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ಮತ್ತೊಂದೆಡೆ ಜಾತಿಗಣತಿ ವರದಿ ಬಹಿರಂಗದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಸ್ವೀಕರಿಸಿ, ಅದರಿಂದ ಎದುರಾಗುವ ಪರಿಣಾಮಗಳನ್ನು ಎದುರಿಸಲು ಸಜ್ಜಾಗುತ್ತಿದ್ದಾರೆ ಎಂಬ ಮುನ್ಸೂಚನೆಗಳು ಕಾಣುತ್ತಿವೆ ಎಂದು ಸಿಎಂ ಆಪ್ತರೊಬ್ಬರು ತಿಳಿಸಿದ್ದಾರೆ. ಇದರಿಂದ ಇಂದು ನಡೆಯುವ ವಿಶೇಷ ಸಚಿವ ಸಂಪುಟ ಸಭೆ ತೀವ್ರ ಕುತೂಹಲ ಮೂಡಿಸಿದೆ.

Update: 2025-04-17 07:41 GMT

Linked news