ನಿರ್ಧಾರ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಬಿಟ್ಟಿದ್ದು: ಮಲ್ಲಿಕಾರ್ಜುನ ಖರ್ಗೆ
ರಾಜ್ಯ ಸರ್ಕಾರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರು ವರದಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ತಾನು ಇನ್ನೂ ವರದಿಯನ್ನು ನೋಡಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು, ಪ್ರತಿಯೊಂದು ರಾಜ್ಯವು ತನ್ನದೇ ಆದ ಕೆಲಸವನ್ನು ಮಾಡುತ್ತದೆ. ಇದನ್ನು ಕೇಂದ್ರ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸುತ್ತದೆ. ನಾನು ವರದಿಯನ್ನು ನೋಡಿಲ್ಲ. ಈ ವಿಷಯವನ್ನು ರಾಜ್ಯ ಸರ್ಕಾರಕ್ಕೆ ಬಿಡಲಾಗಿದೆ ಎಂದು ಅವರು ತಿಳಿಸಿದರು.
ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದ ಪ್ರಶ್ನಗೆ ಉತ್ತರಿಸಿದ ಅವರು, ವಿರೋಧ ಇರಬಹುದು. ನಾನು ನನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟದ ವಿಶೇಷ ಸಭೆ ಗುರುವಾರ ವಿವಾದಾತ್ಮಕ 'ಜಾತಿ ಜನಗಣತಿ'ಯ ಬಗ್ಗೆ ಚರ್ಚಿಸಲಿದೆ' ಎಂದು ಹೇಳಿದರು.
ವಿವಿಧ ಸಮುದಾಯಗಳು, ವಿಶೇಷವಾಗಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಈ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನು ʼಅವೈಜ್ಞಾನಿಕʼ ಎಂದು ಕರೆದಿರುವ ಅವರು ಈ ಹೊಸ ಸಮೀಕ್ಷೆಯನ್ನು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.