ಸಿದ್ದರಾಮಯ್ಯ ಹೇಳಿ ಮಾಡಿಸಿದ ಸಮೀಕ್ಷೆ
ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸುತ್ತಿರುವುದು ದುರದೃಷ್ಟಕರ, ವೈಜ್ಞಾನಿಕವಾಗಿ ನಡೆಸದ ಸಮೀಕ್ಷೆಯನ್ನು ಮಂಡನೆ ಮಾಡುವುದು ಸರಿಯಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಖಂಡಿಸಿದ್ದಾರೆ.
ರಾಜ್ಯದ ಬಹುತೇಕ ಕಡೆಗಳಲ್ಲಿ ಮನೆ ಮನೆಗೆ ಭೇಟಿ ನೀಡದೇ ಸಮೀಕ್ಷೆ ಸಿದ್ಧಪಡಿಸಲಾಗಿದೆ. ಇದು ಸಿದ್ದರಾಮಯ್ಯ ಅವರೇ ಹೇಳಿ ಮಾಡಿಸಿದ ಸಮೀಕ್ಷೆಯಾಗಿದೆ ಎಂದು ಟೀಕಿಸಿದ್ದಾರೆ.
Update: 2025-04-11 07:51 GMT