ಸಾಧನಾ ಸಮಾವೇಶಕ್ಕೆ ಸರ್ಕಾರದ ಹಣ ಬಳಕೆ: ಆರ್‌. ಅಶೋಕ್‌ ಕಿಡಿ

ಕೇರಳದ ವಯನಾಡಿನಲ್ಲಿ ಅತೀವೃಷ್ಟಿಯಾದಾಗ ಹತ್ತು ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನ ಮನೆ ಕಳೆದುಕೊಂಡಿದ್ದಾರೆ. ಇಲ್ಲಿಗೆ ಮಾತ್ರ 5ಲಕ್ಷ ಹಣ ಕೊಟ್ಟಿದ್ದೀರಿ ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದರು.

ಕೇರಳಕ್ಕೊಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ಪ್ರಶ್ನಿಸಿದರು. 10ಕೋಟಿ ರೂ. ಖರ್ಚು ಮಾಡಿ ಹೊಸಪೇಟೆಯಲ್ಲಿ ಸಮಾವೇಶ ಮಾಡಲಾಗಿದೆ. ಇದಕ್ಕೆ ಕಾಂಗ್ರೆಸ್‌ ಪಕ್ಷದ ಹಣ ಖರ್ಚು ಮಾಡಬೇಕಿತ್ತು ಎಂದು ತಿಳಿಸಿದರು.

 

Update: 2025-08-21 13:26 GMT

Linked news