ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ ಕೆಎಸ್ಆರ್ಟಿಸಿ ಚಾಲಕ
ಸಾರಿಗೆ ಮುಷ್ಕರದ ಹಿನ್ನೆಲೆ ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಪ್ರಯಾಣಿಕರನ್ನು ಅರ್ಧ ದಾರಿಯಲ್ಲೇ ಬಿಟ್ಟು ಹೋದ ಪರಿಣಾಮ ಮಹಿಳಾ ಪ್ರಯಾಣಿಕರು ‘ಫ್ರೀಂ ಸ್ಕೀಂ ಬೇಡವಾಗಿತ್ತು’ ಎಂದು ಗೊಣಗಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಶ್ರೀನಿವಾಸಪುರ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ಎಂದು ಪ್ರಯಾಣಿಕರನ್ನ ಅರ್ಧ ದಾರಿಯಲ್ಲೇ ಬಿಟ್ಟು ಹೋಗಿದ್ದಾರೆ.
Update: 2025-08-05 04:21 GMT