ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ನೇರ ಹೊಣೆ
ಆರ್ಸಿಬಿ ಆಟಗಾರರಿಗೆ ವಿಧಾನ ಸೌಧದ ಬಳಿ ಆಯೋಜಿಸಿದ್ದ ಕಾರ್ಯಕ್ರಮ ಆರಂಭ ಮುನ್ನವೇ ಕಾಲ್ತುಳಿತವಾಗಿತ್ತು. ಈ ವಿಷಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ಗೂ ಗೊತ್ತಿತ್ತು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ತಿಳಿಸಿದ್ದಾರೆ.
ವಿಧಾನ ಸೌಧದ ಬಳಿ ಈ ಘಟನೆ ಆಗಿಲ್ಲ ಎಂದು ಸಿಎಂ ತಿಳಿಸಿದ್ದರು. ಪ್ರಕರಣಕ್ಕೆ ಸಂಬಂಧಿದಂತೆ ಅಮಾಯಕ ಅಧಿಕಾರಿಗಳನ್ನ ಅಮಾನತು ಮಾಡಿದ್ದರು. ಕಾಲ್ತುಳಿತ ದುರಂತದ ಹೊಣೆಯನ್ನು ಸಿಎಂ, ಡಿಸಿಎಂ ಹೊರಬೇಕು ಎಂದರು.
Update: 2025-08-11 08:12 GMT