ಚುನಾವಣೆ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಚುನಾವಣೆ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವು!

ಚುನಾವಣೆ ಕರ್ತವ್ಯ ನಿರ್ವಹಿಸಿದ್ದ ವೇಳೆ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮೇಗಳಗೊಲ್ಲರಹಟ್ಟಿ ಮತಗಟ್ಟೆ ಸಂಖ್ಯೆ 202ರಲ್ಲಿ ಎಪಿಆರ್‌ಓ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಯಶೋಧ (58) ವರ್ಷ ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕಿ ಯಶೋಧರ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Update: 2024-04-26 07:59 GMT

Linked news