ಚಾಮರಾಜನಗರದಲ್ಲಿ ಚುನಾವಣೆ ಬಹಿಷ್ಕಾರ: ಗ್ರಾಮಸ್ಥರಿಂದ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಚಾಮರಾಜನಗರದಲ್ಲಿ ಚುನಾವಣೆ ಬಹಿಷ್ಕಾರ: ಗ್ರಾಮಸ್ಥರಿಂದ ಮತಗಟ್ಟೆ ಧ್ವಂಸ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ.

ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ಆದ್ರೆ, ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ.

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

Update: 2024-04-26 11:35 GMT

Linked news