ರಾಜಣ್ಣ ವಜಾ ಘೋರ ಅಪರಾಧ- ವಿಜಯೇಂದ್ರ
ಸಿಎಂ ಪರಮಾಪ್ತ ಕೆ.ಎನ್. ರಾಜಣ್ಣ ಅವರನ್ನು ವಜಾ ಮಾಡಿರುವುದು ಸರಿಯಲ್ಲ, ಅವರ ಅಂತಹ ಘೋರ ಅಪರಾಧ ಏನು ಮಾಡಿದ್ದಾರೆ ಎಂದು ಜನ ಕೇಳುತ್ತಿದ್ದಾರೆ, ಇದಕ್ಕೆ ಉತ್ತರ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ರಾಜಣ್ಣ ವಜಾ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಲ್ಲ, ಸದನದಲ್ಲಿ ಈ ಬಗ್ಗೆ ಚರ್ಚೆ ಆಗಬೇಕು. ರಾಹುಲ್ ಗಾಂಧಿಗೆ ಎಸ್ಟಿ ಜನಾಂಗದ ಮೇಲೆ ಇಷ್ಟೇನಾ ಪ್ರೀತಿ, ಸತ್ಯ ಮಾತನಾಡಿದ ರಾಜಣ್ಣ ವಜಾ ಮಾಡಲಾಗಿದೆ. ಇಂದು ಸದನದಲ್ಲಿ ನಾವು ಪ್ರಶ್ನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Update: 2025-08-12 04:45 GMT