ಉಗ್ರರ ವಿರುದ್ಧ ಭಾರತೀಯ ಸೇನೆಯ ದಿಟ್ಟ ಕ್ರಮಕ್ಕೆ ಕಾಂಗ್ರೆಸ್ ಶ್ಲಾಘನೆ
ಪಾಕಿಸ್ತಾನದಿಂದ ಎದುರಾಗುವ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಮೆಟ್ಟಿ ನಿಲ್ಲಲು ಭಾರತವು ದೃಢವಾದ ರಾಷ್ಟ್ರೀಯ ನೀತಿ ಹೊಂದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಧ್ವಂಸ ಮಾಡಿದ ಭಾರತೀಯ ಸಶಸ್ತ್ರ ಪಡೆಗಳ ಕಾರ್ಯದ ಬಗ್ಗೆ ಹೆಮ್ಮೆಯಿದೆ. ಸೇನೆಯ ದೃಢ ಸಂಕಲ್ಪ ಮತ್ತು ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ದಿನದಿಂದ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಯಾವುದೇ ನಿರ್ಣಾಯಕ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷ ಸರ್ಕಾರದ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಏಕತೆ ಮತ್ತು ಒಗ್ಗಟ್ಟು ಇಂದಿನ ಅಗತ್ಯವಾಗಿದೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಮ್ಮ ಸಶಸ್ತ್ರ ಪಡೆಗಳೊಂದಿಗೆ ನಿಲ್ಲಲಿದೆ. ರಾಷ್ಟ್ರೀಯ ಹಿತಾಸಕ್ತಿ ನಮಗೆ ಅತ್ಯುನ್ನತವಾಗಿದೆ ಎಂದು ತಿಳಿಸಿದ್ದಾರೆ.
Update: 2025-05-07 03:33 GMT