ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಹೇಳಿಕೆಯ ಸಂದರ್ಭದಲ್ಲಿ ಭಾರತದ ಇತ್ತೀಚಿನ ಕ್ರಮವನ್ನು ನೋಡಬಹುದು: ಮಿಶ್ರಿ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಏಪ್ರಿಲ್ 25, 2025 ರಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು "ಈ ಖಂಡನೀಯ ಭಯೋತ್ಪಾದನಾ ಕೃತ್ಯದ ಅಪರಾಧಿಗಳು, ಸಂಘಟಕರು, ಹಣಕಾಸು ಒದಗಿಸುವವರು ಮತ್ತು ಪ್ರಾಯೋಜಕರನ್ನು ಹೊಣೆಗಾರರನ್ನಾಗಿ ಮಾಡುವ ಮತ್ತು ಅವರನ್ನು ನ್ಯಾಯದ ಕಟಕಟೆಗೆ ತರುವ ಅಗತ್ಯತೆ ಇದೆ" ಎಂದು ಒತ್ತಿ ಹೇಳಿದ ಪತ್ರಿಕಾ ಹೇಳಿಕೆಯಲ್ಲಿ ಭಾರತದ ಇತ್ತೀಚಿನ ಕ್ರಮವನ್ನು ಕಾಣಬಹುದು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Update: 2025-05-07 06:56 GMT