ಅನುದಾನವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣ

ಚುನಾವಣೆ ಸಂದರ್ಭದಲ್ಲಿ ನನಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಕಾಕಾ ಪಾಟೀಲ್ ಗೂ ಫ್ರೀ ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಈಗ ಯಾರಿಗೂ ಅನುದಾನ ಇಲ್ಲದಂತಾಗಿದೆ ಎಂದು ಆರ್‌. ಅಶೋಕ್‌ ತಿಳಿಸಿದರು.

ಸಿಎಂ ಅವರ ಆರ್ಥಿಕ ಸಲಹೆಗಾರರೇ ರಾಜ್ಯದ ಅಭಿವೃದ್ಧಿ ಆಗುತ್ತಿಲ್ಲ ಎಂದಿದ್ದಾರೆ. ಶಾಸಕ ರಾಜು ಕಾಗೆ ಕಳೆದ ವರ್ಷದಿಂದ ನನ್ನ ಗೋಳು ಆಲಿಸುತ್ತಿಲ್ಲ, ಹೀಗಾಗಿ ವಿಧಾನಸೌಧಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದಿದ್ದರು. ವಿರೋಧ ಪಕ್ಷದವರು ಆತ್ಮಹತ್ಯೆ ಮಾಡಿಕೊಳ್ಳಬೇಕು ಆದರೆ ಆಡಳಿತ ಪಕ್ಷದ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಅನುದಾನ ನೀಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

 

Update: 2025-08-20 08:25 GMT

Linked news