ಮಂಜುನಾಥ್‌ ರಾವ್‌ ಅಂತಿಮಯಾತ್ರೆ: ಶಿವಮೊಗ್ಗ ಅರ್ಧ ದಿನ ಬಂದ್

ಕಾಶ್ಮೀರದಲ್ಲಿ ನಡೆದ  ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್‌ ರಾವ್‌ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ಆಗಮಿಸಿದಾಗ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಅರ್ಧ ದಿನ  ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿದ್ದರು, ಬುಧವಾರ ರಾತ್ರಿಯಿಂದಲೇ ನಗರದಲ್ಲಿ ವ್ಯಾಪಕ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು. ಪೂರ್ವವಲಯ ಐಜಿ ರವಿಕಾಂತೇಗೌಡ ಅವರ ನೇತೃತ್ವದಲ್ಲಿ ಎಸ್‌ಪಿ ಮಿಥುನ್‌ ಕುಮಾರ್‌ ಅವರು, ಗುರುವಾರ ಮಂಜುನಾಥ್‌ ರಾವ್ ಅವರ ಅಂತಿಮ ಯಾತ್ರೆ ಸರಾಗವಾಗಿ ನಡೆಯಲು ವ್ಯವಸ್ಥೆ ಮಾಡಿದ್ದರು.

ಗುಂಡಾಭಟ್‌ ಅವರ ಮಾರ್ಗದರ್ಶನದಲ್ಲಿ ಮೃತದೇಹಕ್ಕೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ ಅಲಂಕೃತ ವಾಹನದಲ್ಲಿ ಮಂಜುನಾಥರಾವ್‌ ಅಂತಿಮ ಯಾತ್ರೆ ನಡೆಸಲಾಯಿತು.

Update: 2025-04-24 11:11 GMT

Linked news