ಹಳದಿ ಮಾರ್ಗದ ಮೆಟ್ರೋ ನಮ್ಮ ಯೋಜನೆ ಎಂದ ಕಾಂಗ್ರೆಸ್
ನಮ್ಮ ಮೆಟ್ರೋ ಹಳದಿ ಮಾರ್ಗವು ನಮ್ಮ ಯೋಜನೆ, ಇದು ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
ಅಂದಿನ ಎಸ್.ಎಂ ಕೃಷ್ಣ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಮತ್ತು ಬದ್ಧತೆಯಿಂದ ಆರಂಭವಾದ ಈ ಮಹತ್ವಾಕಾಂಕ್ಷಿ ಯೋಜನೆ, ಇಂದು ಉದ್ಘಾಟನೆಯಾಗುತ್ತಿದೆ.
ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ವಾಹನ ದಟ್ಟಣೆಗೆ ಪರಿಣಾಮಕಾರಿ ಪರಿಹಾರ ಒದಗಿಸಿ, ಜನರಿಗೆ ಸುಗಮ ಸಂಚಾರದ ನೂತನ ಯುಗವನ್ನು ಆರಂಭಿಸಿದೆ.
ಬೆಂಗಳೂರು ಮೆಟ್ರೋ ಯೋಜನೆಯ ಪ್ರತಿಯೊಂದು ಹಂತದಲ್ಲೂ, ಕರ್ನಾಟಕ ಸರ್ಕಾರ ಹಣಕಾಸು, ಅಗತ್ಯ ಭೂಮಿ, ಪುನರ್ವಸತಿ ವೆಚ್ಚ ಸೇರಿದಂತೆ ಸಂಪೂರ್ಣ ಸಹಕಾರ ನೀಡಿ, ಯೋಜನೆ ಯಶಸ್ವಿಯಾಗಿ ಪೂರ್ಣಗೊಳ್ಳುವಂತೆ ನೋಡಿಕೊಂಡಿದೆ. ಹಾಗಾಗಿ ಇದು ನಮ್ಮ ಯೋಜನೆ ಎಂದು ಪೋಸ್ಟ್ ಮಾಡಿದೆ.
Update: 2025-08-10 04:25 GMT