ಕರ್ನೂಲ್ ಬಸ್‌ ಅಪಘಾತ; ಡಿ.ಕೆ ಶಿವಕುಮಾರ್‌ ಸಂತಾಪ

ಆಂಧ್ರಪ್ರದೇಶದ ಕುರ್ನೂಲ್‌ ಬಳಿ ಹೈದರಾಬಾದ್-ಬೆಂಗಳೂರು ಮಾರ್ಗದಲ್ಲಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಈ ದುರ್ಘಟನೆಯಲ್ಲಿ ಜೀವ ಕಳೆದುಕೊಂಡ ಎಲ್ಲ ಕುಟುಂಬಗಳಿಗೆ ನಮ್ಮ ತೀವ್ರ ಸಂತಾಪಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. 

ಸಂತ್ರಸ್ತರಾದ ಎಲ್ಲರ ಜೊತೆ ನಾವಿದ್ದೇವೆ. ದುರಂತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ. 



Update: 2025-10-24 04:16 GMT

Linked news