ಆರ್‌ಸಿಬಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಕೆಂಪೇಗೌಡ ಪ್ರತಿಮೆ ಏರಿದ ಅಭಿಮಾನಿಗಳು

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಾಕ್ರಮ ಆಯೋಜಿಸಲಾಗಿದ್ದು, ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ವಿಧಾನಸೌಧದ ಮುಂದಿರುವ ಕೆಂಪೇಗೌಡ ಪ್ರತಿಮೆ ಏರಿದ್ದಾರೆ. ಈಗಾಗಲೇ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಸಾವಿರಾರು ಅಭಿಮಾನಿಗಳು ಸೇರಿದ್ದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಿಧಾನಸೌಧದ ಗೇಟ್‌ಗಳನ್ನು ಮುಚ್ಚಿದ್ದಾರೆ.



Update: 2025-06-04 11:07 GMT

Linked news