ಮಳೆಯಿಂದ ಆರ್‌ಸಿಬಿ ತಂಡಕ್ಕೆ ಅರೆಬರೆ ಸನ್ಮಾನ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಸುದ್ದಿ ತಿಳಿದು ಬುಧವಾರ ಬೆಳಿಗ್ಗೆಯಿಂದಲೇ ಆರ್‌ಸಿಬಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆದರೆ ಕಾರ್ಯಕ್ರಮ ಆರಂಭವಾದ ಸ್ವಲ್ಪ ಸಮಯದಲ್ಲೇ ವಿಧಾನಸೌಧದ ಸುತ್ತಮುತ್ತ ಮಳೆ ಆರಂಭವಾದ ಕಾರಣ ಆಟಗಾರರು ವೇದಿಕೆಯಿಂದ ಬೇಗ ನಿರ್ಗಮಿಸಿದರು. ಇದರಿಂದ ಆರ್‌ಸಿಬಿ ಅಭಿಮಾನಿಗಳು ತೀವ್ರ ನಿರಾಸೆ ಅನುಭವಿಸುವಂತಾಯಿತು.  

Update: 2025-06-04 11:58 GMT

Linked news