ಆರ್ಸಿಬಿ ವಿಜಯೋತ್ಸವ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, 15 ದಿನದಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಾಂತ್ವನ ಹೇಳಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Update: 2025-06-04 15:09 GMT