ಕಾಲ್ತುಳಿತಕ್ಕೆ ಡಿಸಿಎಂ ಡಿಕೆಶಿಯೇ ಹೊಣೆ : HDK ಆರೋಪ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಚಾತುರ್ಯ, ಆತುರ, ಅಪರಿಪಕ್ವ ವರ್ತನೆ ಹಾಗೂ ಅವಿವೇಕಿತನದಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಹನ್ನೊಂದು ಜನ ಕ್ರಿಕೆಟ್ ಪ್ರೇಮಿಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ನಡೆಯಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ತಡರಾತ್ರಿ ಕರೆದಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಕೇಂದ್ರ ಸಚಿವರು ಮಾತನಾಡಿ; ಈ ದುರಂತಕ್ಕೆ ಕಾರಣನಾದ ಅವಿವೇಕಿಯನ್ನು ಸಂಪುಟದಿಂದ ಹೊರ ಹಾಕಬೇಕು ಎಂದು ಒತ್ತಾಯ ಮಾಡಿದರು.

ಕರ್ನಾಟಕದಲ್ಲಿ ಇರುವುದು ಕಟುಕರ ಸರಕಾರ. ಈ ಸರಕಾರದ ಮುಖ್ಯಮಂತ್ರಿಯ ಬಗ್ಗೆ ಈ ಪದ ಹೇಳಲು ನನಗೆ ಬೇಸರವಾಗುತ್ತದೆ. ಅವರೊಬ್ಬ ನಿಷ್ಕ್ರಿಯ ಮುಖ್ಯಮಂತ್ರಿ. ಡಿಸಿಎಂ ಮುಂದೆ ಅವರ ಆಟವೇನೂ ನಡೆಯುತ್ತಿಲ್ಲ. ಇನ್ನು ಗೃಹ ಸಚಿವರ ಬಗ್ಗೆ ಹೇಳುವುದೇ ಬೇಡ. ಈ ವ್ಯಕ್ತಿ ಕೂರು ಎಂದರೆ ಕೂರುತ್ತಾರೆ, ನಿಲ್ಲು ಎಂದರೆ ನಿಲ್ಲುತ್ತಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

Update: 2025-06-04 17:53 GMT

Linked news