ಆರ್ಸಿಬಿ ವಿಜಯೋತ್ಸವ ದುರಂತ: ಮೃತಪಟ್ಟವರಿಗೆ ನಟ ಕಮಲ್ ಹಾಸನ್ ಸಂತಾಪ
ಆರ್ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದರು. ಈ ವೇಳೆ ನಡೆದ ಕಾಲ್ತುಳಿತ ದುರಂತದ ಬಗ್ಗೆ ನಟ ಕಮಲ್ ಹಾಸನ್ ತಮ್ಮ ʼಎಕ್ಸ್ʼ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಬೆಂಗಳೂರಿನಲ್ಲಿ ನಡೆದ ಹೃದಯವಿದ್ರಾವಕ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳ ಜತೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
Update: 2025-06-05 06:03 GMT