ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಭೇಟಿ

 

ಬುಧವಾರ(ಜೂ.4) ದಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ ಗೃಹ ಸಚಿವರು ಸಭೆ ನಡೆಸಿ ಮಾಹಿತಿ ಕಲೆಹಾಕಲಿದ್ದಾರೆ. ಎಲ್ಲಾ ಗೇಟ್ ಬಳಿಯೂ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಕ್ರೀಡಾಂಗಣದ ಗೇಟ್‌ಗಳ ಬಳಿ ಚಪ್ಪಲಿಗಳು ಬಿದ್ದಿದ್ದು ದುರಂತಕ್ಕೆ ಸಾಕ್ಷಿಯಾಗಿದೆ. 

Update: 2025-06-05 06:29 GMT

Linked news