ಸಿಎಂ, ಡಿಸಿಎಂ, ಕೆಎಸ್ಸಿಎ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಚಾರ ಹಾಗೂ ಲಾಭಕ್ಕಾಗಿ ಸಿಎಂ ಹಾಗೂ ಡಿಕೆಶಿ ಅವರು ಆರ್ಸಿಬಿ ಸನ್ಮಾನ ಕಾರ್ಯಕ್ರಮ ಮಾಡಿದ್ದಾರೆ. ಇದರಿಂದ 11 ಜನರ ಸಾವಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕ್ರಿಕೆಟ್ ಮಂಡಳಿ ಪದಾಧಿಕಾರಿಗಳ ವಿರುದ್ಧ ದೂರು ನೀಡಲಾಗಿದೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
Update: 2025-06-05 09:43 GMT