ಕಾಲ್ತುಳಿದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಘೋಷಿಸಿದ ಆರ್‌ಸಿಬಿ

ಬುಧವಾರ(ಜೂ.4)ದಂದು ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಆರ್‌ಸಿಬಿ ಮೃತರ 11 ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ಇದರ ಜತೆಗೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ರಚಿಸಲಾಗುತ್ತಿದೆ. ನಮ್ಮ ಅಭಿಮಾನಿಗಳು ಯಾವಾಗಲೂ ಹೃದಯದಲ್ಲಿರುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ ಎಂದು ಆರ್‌ಸಿಬಿ ಆಡಳಿತ ಮಂಡಳಿ ತಿಳಿಸಿದೆ.

Update: 2025-06-05 10:44 GMT

Linked news