ಕಾಲ್ತುಳಿತ ದುರಂತ: ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಆಸ್ಪತ್ರೆಗೆ ದಾಖಲು
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಳಿ ಬುಧವಾರ(ಜೂ.4) ದಂದು ನಡೆದ ಕಾಲ್ತುಳಿತ ಘಟನೆಯಲ್ಲಿ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರೀಡಾಂಗಣದ ಗೇಟ್ ನಂ.19 ರ ಬಳಿ ಜನ ಒಮ್ಮೆಲೆ ನುಗ್ಗಿದ್ದಾರೆ. ಆದರೆ ಅಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿ ನಿಯೋಜನೆಯಾಗಿರಲಿಲ್ಲ. ಈ ಸಮಯದಲ್ಲಿ ಡಿಸಿಪಿ ಒಬ್ಬರೇ ಲಾಠಿ ಹಿಡಿದು ಗುಂಪು ಚದುರಿಸುತ್ತಿದ್ದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Update: 2025-06-05 14:14 GMT