ಶೆಲ್ ದಾಳಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಜೆ-ಕೆ ಸಿಎಂ, ಮನೆಗಳ ಪುನರ್ನಿರ್ಮಾಣಕ್ಕೆ ಸಹಾಯದ ಭರವಸೆ

ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ ಜನರ ಮನೆಗಳನ್ನು ಪುನರ್ನಿರ್ಮಿಸಲು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬುಧವಾರ ಎಲ್ಲಾ ರೀತಿಯ ಸಹಾಯನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸಲಾಮಾಬಾದ್, ಲಗಾಮಾ, ಬಂಡಿ ಮತ್ತು ಗಿಂಗಲ್ ಸೇರಿದಂತೆ ಉರಿಯ ಶೆಲ್ ದಾಳಿ ಪೀಡಿತ ಪ್ರದೇಶಗಳಿಗೆ ಅಬ್ದುಲ್ಲಾ ಭೇಟಿ ನೀಡಿದರು.

Update: 2025-05-14 08:10 GMT

Linked news