ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ, ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮೂಲಕ ರಾಹುಲ್ ಗಾಂಧಿ ಅವರಿಗೆ ಸ್ವಾಗತಿಸಿದ್ದಾರೆ. 'ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ'ದ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಗುರುವಾರ ದೆಹಲಿಯ ಸುದ್ದಿಗೋಷ್ಠಿಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಇಂದು ಪ್ರತಿಭಟನೆ ನಡೆಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ರಾಹುಲ್ ಗಾಂಧಿ ದೂರು ಸಲ್ಲಿಕೆ ಮಾಡಲಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಟ್ವೀಟ್

ಶ್ರೀ ರಾಹುಲ್ ಗಾಂಧಿ ಅವರೇ, ನಮ್ಮ ಕರ್ನಾಟಕಕ್ಕೆ ಸ್ವಾಗತ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಕಳೆದ 3 ವರ್ಷದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 3 ಲಕ್ಷ ಕೋಟಿ ಸಾಲ ಮಾಡಿದೆ.

ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ.

ನಿಮ್ಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ ಬೇಕಾಗಿರುವುದು 55 ಸಾವಿರ ಕೋಟಿ, ಕಳೆದ 3 ವರ್ಷದಿಂದ ನಿಮ್ಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ 1 ಲಕ್ಷ ಕೋಟಿ.

⁠ನಿಮ್ಮ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ.

ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಸರ್ವಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಮಾಡೋಣ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ಸ್ವಾಗತಿಸಿದ್ದಾರೆ.

Update: 2025-08-08 04:18 GMT

Linked news