2021 ರಾಜ್ಯ ಪ್ರಶಸ್ತಿ ಪ್ರಕಟ: ರಕ್ಷಿತ್‍ ಶೆಟ್ಟಿ, ಅರ್ಚನಾ ಜೋಯಿಸ್‍ ಅತ್ಯುತ್ತಮ ನಟ-ನಟಿ

2021ನೇ ಸಾಲಿನ ಪ್ರಶಸ್ತಿಗಳಿಗೆ ಒಟ್ಟು 58 ಚಿತ್ರಗಳನ್ನು ಸಲ್ಲಿಸಲಾಗಿತ್ತು. ಈ ಪೈಕಿ, 53 ಚಿತ್ರಗಳನ್ನು ಆಯ್ಕೆ ಸಮಿತಿಯು ವೀಕ್ಷಿಸಿ, ಪ್ರಶಸ್ತಿಗೆ ಆಯ್ಕೆ ಮಾಡಿದೆ.

Update: 2025-10-03 17:34 GMT

ಕೆಲವೇ ತಿಂಗಳ ಹಿಂದೆ 2019 ಮತ್ತು 2020 ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಘೋಷಣೆಯಾಗಿತ್ತು. ಶುಕ್ರವಾರ ಸಂಜೆ, 2021ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘777 ಚಾರ್ಲಿ’ ಚಿತ್ರದ ಅಭಿನಯಕ್ಕಾಗಿ ರಕ್ಷಿತ್‍ ಶೆಟ್ಟಿ ಮತ್ತು ‘ಮ್ಯೂಟ್‍’ ಚಿತ್ರದಲ್ಲಿನ ಅಭಿನಯಕ್ಕಾಗಿ ಅರ್ಚನಾ ಜೋಯಿಸ್‍ ಅವರಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಸಿಕ್ಕಿದೆ. ಕೆ.ಎಂ. ರಘು ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ. 

2021ನೇ ಸಾಲಿನ ಪ್ರಶಸ್ತಿಗಳಿಗೆ ಒಟ್ಟು 58 ಚಿತ್ರಗಳನ್ನು ಸಲ್ಲಿಸಲಾಗಿತ್ತು. ಈ ಪೈಕಿ, 53 ಚಿತ್ರಗಳನ್ನು ಆಯ್ಕೆ ಸಮಿತಿಯು ವೀಕ್ಷಿಸಿ, ಪ್ರಶಸ್ತಿಗೆ ಆಯ್ಕೆ ಮಾಡಿದೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅವರ ಅಧ್ಯಕ್ಷತೆ ಈ ಸಮಿತಿಯಲ್ಲಿ ಕೆ.ವೈ. ನಾರಾಯಣಸ್ವಾಮಿ, ರೆಹಮಾನ್‍, ಜಿ.ಕೆ. ಮುದ್ದುರಾಜ್‍ ಮುಂತಾದವರು ಸದಸ್ಯರಾಗಿದ್ದರು.

ಅತ್ಯುತ್ತಮ ಅತ್ಯುತ್ತಮ ಚಿತ್ರವಾಗಿ ರಘು ಕೆ.ಎಂ. ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರ ಆಯ್ಕೆಯಾದರೆ, ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರವಾಗಿ ‘777 ಚಾರ್ಲಿ’ ಮತ್ತು ‘ಬಿಸಿಲು ಕುದುರೆ’ ಚಿತ್ರಗಳು ಆಯ್ಕೆಯಾಗಿವೆ. ವಿಶೇಷ ಸಾಮಾಜಿಕ ಕಾಳಜಿಯ ಚಿತ್ರವಾಗಿ ‘ಭಾರತದ ಪ್ರಜೆಗಳಾದ ನಾವು’, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ‘ಯುವರತ್ನ’, ಅತ್ಯುತ್ತಮ ಮಕ್ಕಳ ಚಿತ್ರವಾಗಿ ‘ಕೇಕ್‍’ ಹಾಗೂ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರವಾಗಿ ಕೊಡವ ಭಾಷೆಯ ‘ನಾಡ ಪೆದ ಆಶಾ’ ಚಿತ್ರಗಳು ಪ್ರಶಸ್ತಿ ಪಡೆದಿವೆ. ಇನ್ನು, ‘ರತ್ನನ್‍ ಪ್ರಪಂಚ’ ಚಿತ್ರದ ಅಭಿನಯಕ್ಕಾಗಿ ಪ್ರಮೋದ್‍ ಮತ್ತು ಹಿರಿಯ ನಟಿ ಉಮಾಶ್ರೀ ಅವರಿಗೆ ಅತ್ಯುತ್ತಮ ಪೋಷಕ ನಟ-ನಟಿ ಪ್ರಶಸ್ತಿ ಸಿಕ್ಕಿದೆ. 

ಪ್ರಶಸ್ತಿ ಪಟ್ಟಿ ಈ ಕೆಳಕಂಡಂತೆ ಇದೆ

ಅತ್ಯುತ್ತಮ ಅತ್ಯುತ್ತಮ ಚಿತ್ರ: ದೊಡ್ಡಹಟ್ಟಿ ಬೋರೇಗೌಡ (ಒಂದು ಲಕ್ಷ ರೂ.ಗಳ ನಗದು ಹಾಗೂ 50 ಗ್ರಾಂ ಚಿನ್ನದ ಪದಕ)

ದ್ವಿತೀಯ ಅತ್ಯುತ್ತಮ ಚಿತ್ರ: 777 ಚಾರ್ಲಿ (75 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಮೂರನೇ ಅತ್ಯುತ್ತಮ ಚಿತ್ರ: ಬಿಸಿಲು ಕುದುರೆ (50 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಭಾರತದ ಪ್ರಜೆಗಳಾದ ನಾವು (75 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಯುವರತ್ನ (50 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಮಕ್ಕಳ ಚಿತ್ರ: ಕೇಕ್‍ (50 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಬಡವ ರಾಸ್ಕಲ್‍ (ಶಂಕರ್‍ ಗುರು) (50 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ನಾಡ ಪೆದ ಆಶಾ (ಕೊಡವ ಭಾಷೆ) (50 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ನಟ: ರಕ್ಷಿತ್ ಶೆಟ್ಟಿ (777 ಚಾರ್ಲಿ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ನಟಿ: ಅರ್ಚನಾ ಜೋಯಿಸ್‍ (ಮ್ಯೂಟ್‍) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಪೋಷಕ ನಟ: ಪ್ರಮೋದ್‍ (ರತ್ನನ್‍ ಪ್ರಪಂಚ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್‍ ಪ್ರಪಂಚ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಕಥೆ: ಮಂಜುನಾಥ್‍ ಮುನಿಯಪ್ಪ (9 ಸುಳ್ಳು ಕಥೆಗಳು) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಚಿತ್ರಕಥೆ: ರಘು ಕೆ.ಎಂ (ದೊಡ್ಡಹಟ್ಟಿ ಬೋರೇಗೌಡ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ತಾಯಿ ಕಸ್ತೂರ್‍ ಗಾಂಧಿ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಛಾಯಾಗ್ರಹಣ: ಭುವನೇಶ್‍ ಪ್ರಭು (ಅಮ್ಮೆ ಸಂಸಾರ - ಕೊಂಕಣಿ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಸಂಗೀತ ನಿರ್ದೇಶನ: ಇಮ್ತಿಯಾಜ್‍ ಸುಲ್ತಾನ್‍ (ಬಿಸಿಲು ಕುದುರೆ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಸಂಕಲನ: ಪ್ರತೀಕ್‍ ಶೆಟ್ಟಿ (777 ಚಾರ್ಲಿ)– (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಬಾಲನಟ: ಮಾಸ್ಟರ್‍ ಅತೀಶ್‍ ಶೆಟ್ಟಿ (ಕೇಕ್‍) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಬಾಲನಟಿ: ಬೇಬಿ ಭೈರವಿ (ಭೈರವಿ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಕಲಾ ನಿರ್ದೇಶನ: ರವಿ ಸಂತೇಹಕ್ಲು (ಭಜರಂಗಿ 2) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಗೀತ ರಚನೆ: ನಾಗಾರ್ಜುನ ಶರ್ಮ (‘777 ಚಾರ್ಲಿ’ ಚಿತ್ರದ ‘ಮಡಿಲನಲ್ಲಿ ಕಡಲಿನಷ್ಟು ಹರಿಗಳಿದ್ದರು …’) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಹಿನ್ನೆಲೆ ಗಾಯಕ: ಅನೀಶ್‍ ಕೇಶವ ರಾವ್‍ (ಶ್ರೀ ಜಗನ್ನಾಥ ದಾಸರು – ರಾಮದೂತನ ಪಾದ …) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಸಹನಾ ಎಂ. ಭಾರದ್ವಾಜ್‍ (ದಂಡಿ – ಮುಗಿಲೇ ಮಾತಾಡು ಮನಸಾಗಿ …) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ತೀರ್ಪುಗಾರರ ವಿಶೇಷ ಪ್ರಶಸ್ತಿ: ಭೈರವಿ, ವಸ್ತ್ರವಿನ್ಯಾಸ (ಯೋಗಿ ಜಿ. ರಾಜ್‍ - ಭಜರಂಗಿ 2) ಮತ್ತು ಪ್ರಸಾದನ – ಶಿವಕುಮಾರ್‍ (ತಾಯಿ ಕಸ್ತೂರ್‍ ಗಾಂಧಿ) – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

ಅತ್ಯುತ್ತಮ ನಿರ್ಮಾಣ ನಿರ್ವಾಹಕ: ಶಿವಕುಮಾರ್‍ ಎಸ್ (ಶಿವಾರ್ಜುನ್‍) – ಪೊಗರು – (20 ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ)

Tags:    

Similar News