ಶಿವರಾಜಕುಮಾರ್ ಅಭಿನಯದ ʼಭೈರತಿ ರಣಗಲ್ʼ ಬಿಡುಗಡೆ ಡೇಟ್ ಫಿಕ್ಸ್

ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼಭೈರತಿ ರಣಗಲ್ʼ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ.

Update: 2024-03-11 13:33 GMT
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 'ಭೈರತಿ ರಣಗಲ್' ಸಿನಿಮಾ ಬಿಡುಗಡೆಗೊಳ್ಖಲಿದೆ.
Click the Play button to listen to article

ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼಭೈರತಿ ರಣಗಲ್ʼ ಸಿನಿಮಾದ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 'ಭೈರತಿ ರಣಗಲ್' ಸಿನಿಮಾವನ್ನು ಶಿವರಾಜ್‌ ಕುಮಾರ್ ಅವರು ತೆರೆಗೆ ತರಲಿದ್ದಾರೆ. 'ವೇದ' ನಂತರ ಅವರ ಹೋಮ್ ಬ್ಯಾನರ್ ಗೀತಾ ಪಿಕ್ಚರ್ಸ್‌ನಲ್ಲಿ ಶುರುವಾಗಿರುವ ಎರಡನೇ ಸಿನಿಮಾ ಇದಾಗಿದೆ. 2017ರಲ್ಲಿ ತೆರೆಕಂಡ 'ಮಫ್ತಿ' ಸಿನಿಮಾದ ಪ್ರೀಕ್ವೆಲ್ ಆಗಿ 'ಭೈರತಿ ರಣಗಲ್' ಸಿನಿಮಾ ಮೂಡಿಬರುತ್ತಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಶಿವರಾಜ್ ಕುಮಾರ್, ಭೈರತಿ ರಣಗಲ್’ ಚಿತ್ರ ಆರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಎಂದು ಈಗಾಗಲೇ ಸಾಕಷ್ಟು ಸುದ್ದಿಯಾಗಿದೆ. ಆದರೆ, ‘ಮಫ್ತಿ’ ಚಿತ್ರ ಮಾಡುವಾಗ ಈ ಚಿತ್ರದಲ್ಲಿ ನಟಿಸಬೇಕಾ ? ಎಂಬ ಗೊಂದಲ ನನ್ನಗಿತ್ತು. ‘ಏಕೆಂದರೆ, ಆ ಚಿತ್ರದಲ್ಲಿ ನನ್ನ ಪಾತ್ರ ಬರುವುದೇ ಇಂಟರ್ ವೆಲ್ ನಂತರ. ಶ್ರೀಮುರಳಿ ಈ ಚಿತ್ರದಲ್ಲಿ ಇನ್ನೊಂದು ಪಾತ್ರವನ್ನು ಮಾಡುತ್ತಿದ್ದರು. ಮುರಳಿ ನನ್ನ ಮಾವನ ಮಗ. ಇಲ್ಲ ಎನ್ನುವಂತೆಯೂ ಇರಲಿಲ್ಲ. ಹಾಗಿರುವಾಗ, ಏನು ಮಾಡುವುದು ಎಂಬ ಪ್ರಶ್ನೆ ಇದ್ದೇ ಇತ್ತು. ಅಂತಹ ಸಂದರ್ಭದಲ್ಲಿ ನಿರ್ದೇಶಕ ನರ್ತನ್ ಬಂದು ನೀವು ಈ ಪಾತ್ರ ಮಾಡಿ ಎಂದರು.

ನನಗೊಂದು ಧೈರ್ಯ ಬಂತು. ಆನಂತರ "ಮಫ್ತಿ" ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಅಭಿನಯಿಸುವಾಗಲೇ ಅದೇನೋ ಆ ಪಾತ್ರವನ್ನು ಇಷ್ಟಪಡತೊಡಗಿದೆ. ಅದಕ್ಕೆ ಆ ಹೆಸರು ಸಹ ಕಾರಣ. ಈ ತರಹದ ಹೆಸರು ಕೇಳೋಕೆ ಸಾಧ್ಯ ಇಲ್ಲ. ಇನ್ನು, ಸಂಭಾಷಣೆ ಚೆನ್ನಾಗಿತ್ತು. ಅಲ್ಲಿದ್ದ ಭೈರತಿ ರಣಗಲ್‌ನ ಸಣ್ಣ ಕಥೆಯನ್ನು ಇಲ್ಲಿ ಬೆಳೆಸಿದ್ದಾರೆ. ಯಾಕೆ ಅವನು ಭೈರತಿ ರಣಗಲ್ ಆಗುತ್ತಾನೆ. ಜನರಿಗೆ ಯಾಕೆ ಅವನನ್ನು ಕಂಡರೆ ಅಷ್ಟು ಪ್ರೀತಿ ಎಂದು ಹೇಳಲಾಗಿದೆ. ಹೆಚ್ಚು ಆಡಂಬರವಿಲ್ಲದೆ, ಸರಳವಾಗಿ ಈ ವಿಷಯವನ್ನು ಹೇಳಲಾಗಿದೆ. ಇಲ್ಲಿ ಎಷ್ಟು ಮಾತು ಬೇಕೋ, ಅಷ್ಟಿದೆ. ಬಹಳ ಚೆನ್ನಾಗಿದೆ ಕಥೆ ಮಾಡಿಕೊಂಡಿದ್ದಾರೆ ನಿರ್ದೇಶಕ ನರ್ತನ್ ಎಂದು ಶಿವರಾಜ್ ಕುಮಾರ್ ಹೇಳಿದರು.

ನಮ್ಮ ಚಿತ್ರ ಆಗಸ್ಟ್ 15ರಂದು ತೆರೆಗೆ ಬರುತ್ತಿದೆ. ಆಗಸ್ಟ್ ನಲ್ಲಿ ಸಾಲುಸಾಲು ರಜೆಗಳಿದೆ. ಸಾಮಾನ್ಯವಾಗಿ ಸತತವಾಗಿ ರಜೆ ಸಿಕ್ಕರೆ, ಜನ ಚಿತ್ರಮಂದಿರಕ್ಕೆ ಬರುತ್ತಾರೆ ಎಂಬ ದೃಷ್ಟಿಯಿಂದ ಆಗಸ್ಟ್ 15 ರಂದು ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ನಿರ್ಮಾಪಕಿ ಗೀತಾ ಶಿವರಾಜಕುಮಾರ್ ತಿಳಿಸಿದರು.

ಈ ಚಿತ್ರವನ್ನು ನರ್ತನ್ ನಿರ್ದೇಶಿಸುತ್ತಿದ್ದು, ಚಿತ್ರದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್, ರಾಹುಲ್ ಬೋಸ್, ಅವಿನಾಶ್ , ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. ʼಭೈರತಿ ರಣಗಲ್ʼ ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

Tags:    

Similar News