ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮೊಂಥೆರೋ

ಸ್ಯಾಂಡಲ್ವುಡ್ನ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮೊಂಥೆರೋ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Update: 2024-08-11 13:23 GMT
ನಟಿ ಸೋನಾಲ್ ಮೊಂಥೆರೋ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್‌ ಡೈರೆಕ್ಟರ್‌ ತರುಣ್‌ ಸುಧೀರ್‌
Click the Play button to listen to article

ಸ್ಯಾಂಡಲ್‌ವುಡ್‌ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮೊಂಥೆರೋ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶನಿವಾರ (ಆಗಸ್ಟ್ 10) ತರುಣ್ ಸುಧೀರ್ ಹಾಗೂ ಸೋನಾಲ್ ಆರತಕ್ಷತೆ ಸಮಾರಂಭ ನಡೆದಿತ್ತು. ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಆಗಮಿಸಿ, ನವ ಜೋಡಿಗೆ ಆಶೀರ್ವಾದ ಮಾಡಿದ್ದರು. ಭಾನುವಾರ (ಆಗಸ್ಟ್ 11) ಈ ಜೋಡಿ ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಕೆಂಗೇರಿ ಸಮೀಪವಿರುವ ಪೂರ್ಣಿಮಾ ಪ್ಯಾಲೇಸ್ನಲ್ಲಿ ತರುಣ್ ಮತ್ತು ಸೋನಲ್ ಮದುವೆ ನಡೆದಿದೆ. ಎರಡೂ ಕಡೆಯ ಕುಟುಂಬಗಳ ಜೊತೆ ಸ್ಯಾಂಡಲ್‌ವುಡ್‌ ತಾರೆಯರು ಈ ಮದುವೆಗೆ ಸಾಕ್ಷಿಯಾಗಿದ್ದಾರೆ. ಮದುವೆಗೆ ತೆಲುಗಿನ ಹಿರಿಯ ನಟ ಜಗಪತಿ ಬಾಬು ಕೂಡ ಆಗಮಿಸಿದ್ದರು.

ತರುಣ್ ಸುಧೀರ್ ಉತ್ತರ ಕರ್ನಾಟಕ ಮೂಲದವರಾಗಿದ್ದು, ಸೋನಾಲ್ ಮಾಂಥೆರೋ ಅಪ್ಪಟ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಮಂಗಳೂರು ಹುಡುಗಿ. ಆದರೂ, ಮೊದಲು ಹಿಂದೂ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಾಲ್ ಮಾಂಥೆರೋ ನಡೆದಿದೆ. ಬೆಳಗ್ಗೆ 10.50 ರಿಂದ 11.35ರ ಒಳಗಿನ ತುಲಾ ಲಗ್ನದಲ್ಲಿ ಈ ಮದುವೆ ನಡೆದಿದೆ. ಎರಡೂ ಕಡೆಯ ಕುಟುಂಬಸ್ಥರು ಹಾಗೂ ಆಪ್ತರು ಈ ಸೆಲೆಬ್ರಿಟಿ ಮದುವೆಗೆ ಸಾಕ್ಷಿಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಾದಬ್ರಹ್ಮ ಹಂಸಲೇಖ, ಅನಿರುದ್ಧ್, ರಾಕ್ಲೈನ್ವೆಂಕಟೇಶ್, ಮಾಲಾಶ್ರೀ, ಕೆ.ಮಂಜು ಸೇರಿದಂತೆ ಹಲವು ಗಣ್ಯರು ಆಗಮಿಸಿ, ಶುಭ ಕೋರಿದ್ದಾರೆ.

ತರುಣ್ ನಿರ್ದೇಶನ ಮಾಡಿದ್ದ ‘ರಾಬರ್ಟ್’ ಸಿನಿಮಾದಲ್ಲಿ ಸೋನಲ್ ನಟಿಸಿದ್ದರು. ತುಳು ಸಿನಿಮಾ ಮೂಲಕ ನಟನೆ ಆರಂಭಿಸಿದ ಸೋನಲ್, ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ‘ಪಂಚತಂತ್ರ’, ‘ಗರಡಿ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ‘ಬುದ್ಧಿವಂತ 2’ ಹಾಗೂ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ತರುಣ್ ಸುಧೀರ್, ಕನ್ನಡದ ಖ್ಯಾತ ಖಳನಟ ಸುಧೀರ್ ಅವರ ಪುತ್ರ. ಅವರ ಸಹೋದರ ನಂದ ಕಿಶೋರ್ ಸಹ ಕನ್ನಡ ಚಿತ್ರರಂಗದ ಜನಪ್ರಿಯ ಸಿನಿಮಾ ನಿರ್ದೇಶಕ. ಸ್ಯಾಂಡಲ್ವುಡ್ನಲ್ಲಿ ನಿರ್ದೇಶಕ ತರುಣ್ ಸುಧೀರ್ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ‘ಕಾಟೇರ’, ‘ರಾಬರ್ಟ್’ ಸಿನಿಮಾಗಳ ಮೂಲಕ ತರುಣ್ ಸುಧೀರ್ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ.

ದರ್ಶನ್ ನೆನೆದು ತರುಣ್ ಭಾವುಕ

ಸಿನಿಮಾ ವಿಚಾರಕ್ಕೆ ಮಾತ್ರವಲ್ಲದೇ ವೈಯಕ್ತಿಕ ಜೀವನದಲ್ಲೂ ತರುಣ್ ಸುಧೀರ್ ಮತ್ತು ದರ್ಶನ್ ನಡುವೆ ಉತ್ತಮ ಒಡನಾಟ ಇದೆ. ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ತರುಣ್ ಸುಧೀರ್ ಮದುವೆ ಆಗಿದ್ದಾರೆ. ಈ ವೇಳೆ ತರುಣ್ ಸುಧೀರ್ ಅವರು ದರ್ಶನ್ ಬಗ್ಗೆ ಮಾತನಾಡುತ್ತಾ ಎಮೋಷನಲ್ ಆಗಿದ್ದಾರೆ. ‘ಆಗಸ್ಟ್ 11ರ ದಿನಾಂಕ ಮೊದಲೇ ನಿರ್ಧಾರ ಆಗಿತ್ತು. ಹಾಗಾಗಿ ನಾನು ಬಹಳ ಗೊಂದಲದಲ್ಲಿ ಇದ್ದೆ. ಮದುವೆಗೆ ನನ್ನನ್ನು ಹೆಚ್ಚು ಒತ್ತಾಯಿಸಿದ್ದು ನಮ್ಮ ತಾಯಿ. ಅವರನ್ನು ಬಿಟ್ಟರೆ ದರ್ಶನ್. ಅವರು ಅಲ್ಲಿಂದಲೇ ಆಶೀರ್ವಾದ ಮಾಡುತ್ತಾರೆ. ಅವರು ಹೊರಬಂದ ಬಳಿಕ ನಾವು ಹೋಗಿ ಆಶೀರ್ವಾದ ಪಡೆಯುತ್ತೇವೆ. ಜೀವನದಲ್ಲಿ ಇದು ಮಹತ್ವದ ಹಂತ. ಇದನ್ನು ನಮ್ಮ ಆತ್ಮೀಯರು ನೋಡಬೇಕು. ಅವರು ಇಲ್ಲ ಎಂದಾಗ ಎಮೋಷನಲ್ ಆಗುತ್ತೇವೆ’ ಎಂದು ತರುಣ್ ಸುಧೀರ್ ಹೇಳಿದ್ದಾರೆ.

Tags:    

Similar News