ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದಲ್ಲಿ ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ಭಾರತದ ವಾಯುಪ್ರದೇಶದ ಮೇಲೆ ನಿರ್ಬಂಧಗಳು ಜಾರಿಯಾಗಿವೆ. ಹೀಗಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳು ಜಮ್ಮು, ಶ್ರೀನಗರ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಸೇವೆಗಳನ್ನು ರದ್ದುಗೊಳಿಸಿವೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಶ್ರೀನಗರ, ಲೇಹ್, ಜೋಧ್ಪುರ, ಅಮೃತಸರ, ಭುಜ್, ಜಾಮ್ನಗರ, ಚಂಡೀಗಢ ಮತ್ತು ರಾಜ್ಕೋಟ್ಗೆ ಮತ್ತು ಅಲ್ಲಿಂದ ಎಲ್ಲ ವಿಮಾನ ಸೇವೆಗಳನ್ನು ಮಧ್ಯಾಹ್ನದವರೆಗೆ ರದ್ದುಗೊಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳೂ ಸಹ ಪರಿಣಾಮ ಬೀರಿವೆ. "ಅಮೃತಸರಕ್ಕೆ ತೆರಳುತ್ತಿದ್ದ ಎರಡು ಅಂತಾರಾಷ್ಟ್ರೀಯ ವಿಮಾನಗಳನ್ನು ದೆಹಲಿಗೆ ತಿರುಗಿಸಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ" ಎಂದು ಏರ್ ಇಂಡಿಯಾ ತನ್ನ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಸ್ಪೈಸ್ಜೆಟ್ನಿಂದ ವಿಮಾನ ಸೇವೆ ವಿವರ ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಾರ, ಉತ್ತರ ಭಾರತದ ಕೆಲವು ಭಾಗಗಳಲ್ಲಿನ ವಿಮಾನ ನಿಲ್ದಾಣಗಳಾದ ಧರ್ಮಶಾಲಾ (DHM), ಲೇಹ್ (IXL), ಜಮ್ಮು (IXJ), ಶ್ರೀನಗರ (SXR) ಮತ್ತು ಅಮೃತಸರ (ATQ) ಮುಂದಿನ ಸೂಚನೆಯವರೆಗೆ ಮುಚ್ಚಿದೆ. . ಇಂಡಿಗೋ ವಿಮಾನ ಸೇವೆಗಳ ಮೇಲೆ ಪರಿಣಾಮ ಇಂಡಿಗೋ ವಿಮಾನಯಾನ ಸಂಸ್ಥೆಯು ವಾಯುಪ್ರದೇಶದ ಬದಲಾಗುತ್ತಿರುವ ಪರಿಸ್ಥಿತಿಯಿಂದಾಗಿ ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ಧರ್ಮಶಾಲಾಕ್ಕೆ ಮತ್ತು ಅಲ್ಲಿಂದ ವಿಮಾನ ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದೆ. ಈ ನಗರಗಳಿಗೆ ಸಂಚರಿಸುವ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿರಬೇಕೆಂದು ಸೂಚಿಸಲಾಗಿದೆ. ಭಯೋತ್ಪಾದಕರ ಗುರಿಗಳ ಮೇಲೆ ದಾಳಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಬೆಳಿಗ್ಗೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿವೆ. ಇವುಗಳಲ್ಲಿ ಜೈಶ್-ಎ-ಮೊಹಮದ್ನ ಬಲವಾದ ಕೇಂದ್ರವಾದ ಬಹವಲ್ಪುರ ಮತ್ತು ಲಷ್ಕರ್-ಎ-ತೊಯ್ಬಾದ ಮುರಿದ್ಕೆ ಕೇಂದ್ರವೂ ಸೇರಿವೆ. ಈ ದಾಳಿಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯಾಗಿದ್ದು, ಇದನ್ನು "ಆಪರೇಷನ್ ಸಿಂದೂರ" ಎಂದು ಕರೆಯಲಾಗಿದೆ. ಈ ಕಾರ್ಯಾಚರಣೆಯನ್ನು ಹೆಚ್ಚು ಧೈರ್ಯಶಾಲಿ ಮತ್ತು ರಿಸ್ಕ್ ತೆಗೆದುಕೊಂಡ ಕ್ರಮ ಎಂದು ವಿಶ್ಲೇಷಕರು ಬಣ್ಣಿಸಿದ್ದಾರೆ, ಇದು ಭಾರತದ ನೀತಿಯಲ್ಲಿ ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ.
ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದಲ್ಲಿ ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ಭಾರತದ ವಾಯುಪ್ರದೇಶದ ಮೇಲೆ ನಿರ್ಬಂಧಗಳು ಜಾರಿಯಾಗಿವೆ. ಹೀಗಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳು ಜಮ್ಮು, ಶ್ರೀನಗರ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಸೇವೆಗಳನ್ನು ರದ್ದುಗೊಳಿಸಿವೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಶ್ರೀನಗರ, ಲೇಹ್, ಜೋಧ್ಪುರ, ಅಮೃತಸರ, ಭುಜ್, ಜಾಮ್ನಗರ, ಚಂಡೀಗಢ ಮತ್ತು ರಾಜ್ಕೋಟ್ಗೆ ಮತ್ತು ಅಲ್ಲಿಂದ ಎಲ್ಲ ವಿಮಾನ ಸೇವೆಗಳನ್ನು ಮಧ್ಯಾಹ್ನದವರೆಗೆ ರದ್ದುಗೊಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳೂ ಸಹ ಪರಿಣಾಮ ಬೀರಿವೆ. "ಅಮೃತಸರಕ್ಕೆ ತೆರಳುತ್ತಿದ್ದ ಎರಡು ಅಂತಾರಾಷ್ಟ್ರೀಯ ವಿಮಾನಗಳನ್ನು ದೆಹಲಿಗೆ ತಿರುಗಿಸಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ" ಎಂದು ಏರ್ ಇಂಡಿಯಾ ತನ್ನ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಸ್ಪೈಸ್ಜೆಟ್ನಿಂದ ವಿಮಾನ ಸೇವೆ ವಿವರ ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಾರ, ಉತ್ತರ ಭಾರತದ ಕೆಲವು ಭಾಗಗಳಲ್ಲಿನ ವಿಮಾನ ನಿಲ್ದಾಣಗಳಾದ ಧರ್ಮಶಾಲಾ (DHM), ಲೇಹ್ (IXL), ಜಮ್ಮು (IXJ), ಶ್ರೀನಗರ (SXR) ಮತ್ತು ಅಮೃತಸರ (ATQ) ಮುಂದಿನ ಸೂಚನೆಯವರೆಗೆ ಮುಚ್ಚಿದೆ. . ಇಂಡಿಗೋ ವಿಮಾನ ಸೇವೆಗಳ ಮೇಲೆ ಪರಿಣಾಮ ಇಂಡಿಗೋ ವಿಮಾನಯಾನ ಸಂಸ್ಥೆಯು ವಾಯುಪ್ರದೇಶದ ಬದಲಾಗುತ್ತಿರುವ ಪರಿಸ್ಥಿತಿಯಿಂದಾಗಿ ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ಧರ್ಮಶಾಲಾಕ್ಕೆ ಮತ್ತು ಅಲ್ಲಿಂದ ವಿಮಾನ ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದೆ. ಈ ನಗರಗಳಿಗೆ ಸಂಚರಿಸುವ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿರಬೇಕೆಂದು ಸೂಚಿಸಲಾಗಿದೆ. ಭಯೋತ್ಪಾದಕರ ಗುರಿಗಳ ಮೇಲೆ ದಾಳಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಬೆಳಿಗ್ಗೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿವೆ. ಇವುಗಳಲ್ಲಿ ಜೈಶ್-ಎ-ಮೊಹಮದ್ನ ಬಲವಾದ ಕೇಂದ್ರವಾದ ಬಹವಲ್ಪುರ ಮತ್ತು ಲಷ್ಕರ್-ಎ-ತೊಯ್ಬಾದ ಮುರಿದ್ಕೆ ಕೇಂದ್ರವೂ ಸೇರಿವೆ. ಈ ದಾಳಿಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯಾಗಿದ್ದು, ಇದನ್ನು "ಆಪರೇಷನ್ ಸಿಂದೂರ" ಎಂದು ಕರೆಯಲಾಗಿದೆ. ಈ ಕಾರ್ಯಾಚರಣೆಯನ್ನು ಹೆಚ್ಚು ಧೈರ್ಯಶಾಲಿ ಮತ್ತು ರಿಸ್ಕ್ ತೆಗೆದುಕೊಂಡ ಕ್ರಮ ಎಂದು ವಿಶ್ಲೇಷಕರು ಬಣ್ಣಿಸಿದ್ದಾರೆ, ಇದು ಭಾರತದ ನೀತಿಯಲ್ಲಿ ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ.