ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ : ಪ್ರಧಾನಿ ನರೇಂದ್ರ ಮೋದಿ ಬೇಸರ

ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ.;

Update: 2025-06-04 14:47 GMT

ಐಪಿಎಲ್‌ನಲ್ಲಿ ಗೆಲುವು ಸಾಧಿಸಿದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. 

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು, ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ.ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ ಕೇಂದ್ರದ ನಾಯಕರು ಸಹ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. 

ಐಪಿಎಲ್‌ ಪಂದ್ಯದಲ್ಲಿ ೧೮ ವರ್ಷಗಳ ಬಳಿಕ ಐತಿಹಾಸಿಕ ಗೆಲುವು ಸಾಧಿಸಿದಕ್ಕಾಗಿ ರಾಜ್ಯ ಸರ್ಕಾರವು ಆರ್‌ಸಿಬಿ ತಂಡಕ್ಕೆ ಅಭಿನಂದನೆ ಕಾರ್ಯಕ್ರಮ ನಡೆಸಿತು. ವಿಧಾನಸೌಧದ ಭವ್ಯಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ನಡೆಸಲಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿ ಒಳಗೆ ಪ್ರವೇಶಿಸಲು ಏಕಾಏಕಿ ನುಗ್ಗಿದ್ದ ಕಾರಣ ಕಾಲ್ತುಳಿತ ಸಂಭಿಸಿತು. ಘಟನೆಯಲ್ಲಿ ಹಲವು ೧೦ಕ್ಕೂ ಹೆಚ್ಚು ಸಾವನ್ನಪ್ಪಿದರೆ ಹಲವು ಮಂದಿ ಗಾಯಗೊಂಡರು. ಇದಲ್ಲದೇ, ಇನ್ನಷ್ಟು ಮಂದಿ ಅಸ್ವಸ್ಥಗೊಂಡರು. 

ಅಭಿನಂದನಾ ಸಮಾರಂಭವನ್ನು ಆಯೋಜಿಸಲು ಯಾವುದೇ ಪೂರ್ವ ಸಿದ್ಧತೆಗಳಿಲ್ಲದಿರುವುದು ಮತ್ತು ರಾಜ್ಯ ಕಾಂಗ್ರೆಸ್‌ ಸರ್ಕಾರದ ಆತುರದ ನಿರ್ಧಾರವೇ ಅನಾಹುತಕ್ಕೆ ಕಾರಣವಾಗಿದೆ. ಸರ್ಕಾರ ಈ ನಡೆಗೆ ಪ್ರತಿಪಕ್ಷಗಳು ಸೇರಿದಂತೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. 

Tags:    

Similar News