ದರ್ಶನ್‌ ಬಂಧನ: ಅಭಿಮಾನಿ ಆತ್ಮಹತ್ಯೆಗೆ ಶರಣು

Update: 2024-06-17 07:28 GMT

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನವಾಗಿರುವುದರಿಂದ ಬೇಸಗೊಂಡಿರುವ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಭೈರೇಶ್‌ ಹೆಸರಿನ ದರ್ಶನ್‌ ಅಭಿಮಾನಿ ಮೋರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಟಿದ್ದಾನೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆದೊಡ್ಡಿಯಲ್ಲಿ ಈ ಘಟನೆ ನಡೆದಿದ್ದು, ಭೈರೇಶ್‌ ಕಳೆದ 2-3 ದಿನಗಳಿಂದ ಅನ್ನ ನೀರು ಬಿಟ್ಟಿದ್ದರು. ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತೆಂದು ಆತ್ಮಹತ್ಯೆ ಶಂಕೆ ಮಾಡಿಕೊಂಡಿರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ.

ತಮ್ಮ ನೆಚ್ಚಿನ ನಟ ದರ್ಶನ್ ಅವರ ಪರಿಸ್ಥಿತಿ ನೆನೆದು ಭೈರೇಶ್ ಸಾಕಷ್ಟು ಮರುಗಿದ್ದರು. ನಿತ್ರಾಣಗೊಂಡು ಮೋರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆ ನಡೆಯುತ್ತಿದೆ. ನಿಜವಾಗಲೂ ನೋವಿನಲ್ಲೇ ಆತ ಮೃತಪಟ್ಟಿದ್ದೇ ಎನ್ನುವ ಪ್ರಶ್ನೆ ಮೂಡಿದೆ.

Tags:    

Similar News