ಜೈಲಲ್ಲಿರುವ ಕೊಲೆ ಆರೋಪಿಯಿಂದ ಹಿರಿಯೂರಿನ ಉದ್ಯಮಿಗೆ ಜೀವ ಬೆದರಿಕೆ

ಜೈಲಿನಲ್ಲಿ ಇದ್ದರೂ ಸಹಚರರನ್ನು ಕಳುಹಿಸಿ ಬೆದರಿಕೆ ಹಾಕುವುದು, ವಾಯ್ಸ್ ಕಾಲ್ ಮತ್ತು ಮೆಸೇಜ್‌ಗಳ ಮೂಲಕ ನಿರಂತರವಾಗಿ ಧಮ್ಕಿ ನೀಡುತ್ತಿದ್ದಾನೆ ಎಂದು ಉದ್ಯಮಿ ಅರ್ಜುನ್ ಸಿಂಗ್‌ ಆರೋಪಿಸಿದ್ದಾರೆ.;

Update: 2025-04-15 10:08 GMT

ಸಾಂದರ್ಭಿಕ ಚಿತ್ರ

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ  ಚಿತ್ರದುರ್ಗದ ಹಿರಿಯೂರಿನ ಉದ್ಯಮಿ ಅರ್ಜುನ್ ಸಿಂಗ್‌ ಎಂಬುವರಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.   

ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ ಆರೋಪಿ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ, ಹಿರಿಯೂರಿನ ಉದ್ಯನಿ ಅರ್ಜುನ್ ಸಿಂಗ್​ಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವಿದೆ. ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಲ್ಲದೆ, ನಿರಂತರವಾಗಿ ವಾಯ್ಸ್ ಕಾಲ್, ಮೆಸೇಜ್​ಗಳ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಅರ್ಜುನ್ ಸಿಂಗ್​ ಆರೋಪಿಸಿದ್ದಾರೆ.

ಅರ್ಜುನ್ ಸಿಂಗ್ ಅವರು ಹಿರಿಯೂರು ಸರ್ಕಾರಿ ಆಸ್ಪತ್ರೆ ಬಳಿ ಆಯಕಟ್ಟಿನ ಜಾಗದಲ್ಲಿರುವ ಕಟ್ಟಡದಲ್ಲಿ ಮಳಿಗೆ ನಡೆಸುತ್ತಿದ್ದಾರೆ. ಈ ಕಟ್ಟಡವನ್ನು ಮೂರು ದಿನಗಳಲ್ಲಿ ಖಾಲಿ ಮಾಡದಿದ್ದರೆ ಸುಟ್ಟುಹಾಕುವುದಾಗಿ ಹಾಗೂ ಜೀವ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿರುವುದು ಮಾತ್ರವಲ್ಲದೆ ಕೆಲ ದಿನ ಹಿಂದೆ ಇಬ್ಬರು ಹುಡುಗರನ್ನು ಗಾರ್ಮೆಂಟ್ಸ್ ಗೆ ಕಳಿಸಿ ಅವಾಜ್ ಹಾಕಿಸಿದ್ದ. ಜನವರಿ 10 ರಂದು ಸಹ ಅಪರಿಚಿತ ಯುವಕರಿಬ್ಬರು ಬಂದು ಧಮ್ಕಿ ಹಾಕಿದ್ದರು. ಈ ವಿಡಿಯೋ ಸಿಸಿಟಿವಿಲಿ ರೆಕಾರ್ಡ್ ಆಗಿತ್ತು. ಸುಜಯ್ ಕಡೆಯವರು ಎಂದು ಹೇಳಿಕೊಂಡು ಬಂದು ಯುವಕರು ಧಮ್ಕಿ ಹಾಕಿದ್ದರು. ಈ ಬಗ್ಗೆ ಅರ್ಜುನ್ ಸಿಂಗ್ ಹಿರಿಯೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಅರ್ಜುನ್‌ಗೆ ಮಾತ್ರವಲ್ಲದೆ,  ಕಟ್ಟಡ ಮಾಲೀಕ ಸೂರ್ಯನಾರಾಯಣ, ಅವರ ಪುತ್ರನಿಗೂ ಕರೆ ಮಾಡಿ ಧಮ್ಕಿ ಹಾಕಿದ್ದಾನೆ ಹಾಕಿದ್ದಾನೆ. ಸುಜಯ್‌ ಸೂರ್ಯನಾರಾಯಣರ ಸಹೋದರ ಚಂದ್ರಶೇಖರ್ ಪುತ್ರ. ಚಂದ್ರಶೇಖರ್ ದಶಗಳ ಹಿಂದೆಯೇ ಆಸ್ತಿಯಲ್ಲಿ ಪಾಲು ಪಡೆದಿದ್ದರು. ಆದರೆ ಈಗ ಸುಜಯ್ “ನಾನು ನಿನ್ನ ಮಗನಂತೆ, ನನಗೂ ಆಸ್ತಿಯಲ್ಲಿ ಪಾಲು ಕೊಡು” ಎಂದು ಧಮ್ಕಿ ಹಾಕಿದ್ದಾನೆ. ಆದರೆ ಸೂರ್ಯನಾರಾಯಣ, ಸುಜಯ್ ಮತ್ತು ನಮ್ಮ ಮದ್ಯೆ ಯಾವುದೇ ಆಸ್ತಿ ವಿವಾದ ಇಲ್ಲ ಎಂದಿದ್ದಾರೆ.

ಉದ್ಯಮಿ ಅರ್ಜುನ್ ಸಿಂಗ್‌ನ್ನು ಬೆದರಿಸಿ ಮಳಿಗೆ ಖಾಲಿ ಮಾಡಿಸಲು ಹಾಗೂ ಆ ಸ್ಥಳವನ್ನು ತನ್ನ ಸುಪರ್ದಿಗೆ ಪಡೆಯಲು ಸುಜಯ್ ಈ ತಂತ್ರ ರೂಪಿಸಿರುವದಾಗಿ ಶಂಕೆ ವ್ಯಕ್ತವಾಗಿದೆ. 

Tags:    

Similar News