ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯಾಪ್ತಿಯಲ್ಲಿ ಬಿಡಿ, ಸಿಗರೇಟ್, ಗುಟ್ಕಾ ಹಾಗೂ ಪ್ಲಾಸ್ಟಿಕ್ ಮಾರಾಟ ನಿಷೇಧ

ಪ್ಲಾಸ್ಟಿಕ್ ನಿಷೇಧದ ಕುರಿತು ಮಾತನಾಡುವಾಗ, ಸದ್ಯ ಅಂಗಡಿಗಳಲ್ಲಿ ಇರುವ ಪ್ಲಾಸ್ಟಿಕ್ ದಾಸ್ತಾನು ಮುಗಿಯುವವರೆಗೆ ಅವುಗಳ ಮಾರಾಟಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ.;

Update: 2025-08-16 07:35 GMT

ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಾಲಯ

ದೇವಸ್ಥಾನದ ವ್ಯಾಪ್ತಿಯಲ್ಲಿ ಬಿಡಿ, ಸಿಗರೇಟ್ ಮತ್ತು ಗುಟ್ಕಾ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ವ್ಯಾಪಾರಸ್ಥರಿಗೆ ಸ್ಪಷ್ಟವಾಗಿ ತಿಳಿಸಲಾಯಿತು. ಈ ನಿಷೇಧವು ಶಾಶ್ವತವಾಗಿ ಜಾರಿಯಲ್ಲಿರಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ನಿರ್ಬಂಧ ಕುರಿತು ದೇವಸ್ಥಾನದ ಅಂಗಡಿ-ಕಟ್ಟಡಗಳ ಬಾಡಿಗೆದಾರರು ಮತ್ತು ವ್ಯಾಪಾರಸ್ಥರಿಗೆ ಮಾಹಿತಿ ನೀಡುವ ಸಭೆಯು ಶುಕ್ರವಾರ ನಡೆಯಿತು. ಈ ಸಭೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ.

ದೇವಸ್ಥಾನದ ವ್ಯಾಪ್ತಿಯಲ್ಲಿ ಬಿಡಿ, ಸಿಗರೇಟ್ ಮತ್ತು ಗುಟ್ಕಾ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ವ್ಯಾಪಾರಸ್ಥರಿಗೆ ಸ್ಪಷ್ಟವಾಗಿ ತಿಳಿಸಲಾಯಿತು. ಈ ನಿಷೇಧವು ಶಾಶ್ವತವಾಗಿ ಜಾರಿಯಲ್ಲಿರಲಿದೆ.

ಪ್ಲಾಸ್ಟಿಕ್ ಬಳಕೆ ಕುರಿತು ಮಾರ್ಗಸೂಚಿ

ಪ್ಲಾಸ್ಟಿಕ್ ನಿಷೇಧದ ಕುರಿತು ಮಾತನಾಡುವಾಗ, ಸದ್ಯ ಅಂಗಡಿಗಳಲ್ಲಿ ಇರುವ ಪ್ಲಾಸ್ಟಿಕ್ ದಾಸ್ತಾನು ಮುಗಿಯುವವರೆಗೆ ಅವುಗಳ ಮಾರಾಟಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ಪಷ್ಟಪಡಿಸಿದರು. ಆದರೆ, ನಂತರ ಶಾಶ್ವತವಾಗಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ಲಾಸ್ಟಿಕ್ ಬಳಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಈ ನಿರ್ಧಾರಗಳನ್ನು ಜಾರಿಗೊಳಿಸಲು ಪರಿಶೀಲನಾ ತಂಡಗಳು ಅಂಗಡಿಗಳಿಗೆ ಭೇಟಿ ನೀಡಲಿವೆ.

ಈ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಜಿತ್ ಕುಮಾರ್, ಸೌಮ್ಯ ಭರತ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ., ಲೋಲಾಕ್ಷ ಕೈಕಂಬ ಹಾಗೂ ಪ್ರಮುಖರಾದ ಸುಧೀರ್ ಶೆಟ್ಟಿ, ಶಿವರಾಮ ರೈ, ಮಹೇಶ್, ಮೋನಪ್ಪ ಡಿ., ಉದಯ ಕುಮಾರ್, ಯೋಗೀಶ್, ಮಾಧವ ದೇವರಗದ್ದೆ, ರವಿ ಕಕ್ಕೆಪದವು, ಗಣೇಶ್ ಪ್ರಸಾದ್, ಯಜ್ಞೇಶ್ ಆಚಾರ್, ಸುದರ್ಶನ ಜೋಯಿಸ, ಗೋಪಾಲ್ ಎಣ್ಣೆ ಮಜಲು, ರವೀಂದ್ರ ಸುಬ್ರಹ್ಮಣ್ಯ, ದೀಪಕ್ ನಂಬಿಯಾರ್, ರತ್ನಾವತಿ ನೂಚಿಲ, ನಿತಿಶ್, ಸಂತೋಪ್, ದಿನೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ದೇವಸ್ಥಾನದ ಪಾವಿತ್ರ್ಯತೆ ಮತ್ತು ಪರಿಸರ ಶುಚಿತ್ವವನ್ನು ಕಾಪಾಡುವ ನಿಟ್ಟಿನಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

Tags:    

Similar News