2015 ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸಿದ್ಧಪಡಿಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಯನ್ನು ತೆರೆಮರೆಗೆ ಸರಿಸಿರುವ ರಾಜ್ಯ ಸರ್ಕಾರ, ಹೊಸದಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಗುರುವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಹೊಸದಾಗಿ ಸಮೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕಾಂತರಾಜ್ ಸಮೀಕ್ಷೆಯು ಹತ್ತು ವರ್ಷಗಳ ಹಳೆಯ ವರದಿಯಾದ ಕಾರಣ ಹೊಸದಾಗಿ ಸಮೀಕ್ಷೆ ನಡೆಸಿ, ಜಾತಿವಾರು ಜನಸಂಖ್ಯೆ ಹಾಗೂ ಸಾಮಾಜಿಕ, ಶೈಕ್ಷಣಿಕ ಅಂಶಗಳನ್ನು ಕಲೆ ಹಾಕಲು ಸಚಿವ ಸಂಪುಟ ಒಮ್ಮತದ ನಿರ್ಣಯ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮರು ಸಮೀಕ್ಷೆ ನಡೆಸುವ ಕುರಿತು ಚರ್ಚಿಸಲು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮರು ಸಮೀಕ್ಷೆ ಕುರಿತಂತೆ ಸಚಿವರು ಪರ-ವಿರೋಧದ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೊಸ ಸಮೀಕ್ಷೆಗೆ ನಿರ್ಧರಿಸಲಾಗಿದೆ.ಕಾಂತರಾಜ್ ಹಾಗೂ ಜಯ ಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನೇ ಅಂಗೀಕರಿಸಬೇಕು. ಯಾವುದೇ ಕಾರಣಕ್ಕೂ ಮರು ಸಮೀಕ್ಷೆ ಬೇಡ ಎಂದು ಅಹಿಂದ ವರ್ಗಗಳ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳ ಸಚಿವರು ಮರು ಸಮೀಕ್ಷೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿದ್ದರು. ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಕಾಂಗ್ರೆಸ್ ವರಿಷ್ಠರು ಸಾಮಾಜಿಕ ಹಾಗೂ ಶೈಕ್ಷಣಿಕ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಂಡು ದತ್ತಾಂಶಗಳ ಮರು ಸಮೀಕ್ಷೆ ನಡೆಸುವಂತೆ ಸೂಚನೆ ನೀಡಿತ್ತು. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಈಗಾಗಲೇ ಚರ್ಚೆಗೆ ಬಂದಿರುವ ವರದಿಯನ್ನು ಏನು ಮಾಡಬೇಕು, ಯಾವ ರೀತಿಯಲ್ಲಿ ಮರು ಸಮೀಕ್ಷೆ ನಡೆಸಬೇಕು, ಸರ್ಕಾರದ ಮುಂದಿನ ನಡೆ ಹೇಗಿರಬೇಕು ಎಂದು ಎಲ್ಲಾ ಸಚಿವರ ಅಭಿಪ್ರಾಯ ಸಂಗ್ರಹಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.ಪ್ರಬಲ ಸಮುದಾಯಗಳ ಸ್ವಾಗತ2015 ರಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದ ಸಮೀಕ್ಷಾ ವರದಿಯನ್ನು ಪ್ರಬಲ ಸಮುದಾಯಗಳು ವಿರೋಧಿಸಿದ್ದವು.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳನ್ನು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗ ಅಧ್ಯಯನ ಮಾಡಿ ವರದಿ ಸಲ್ಲಿಸಿದ್ದರೂ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ತಮ್ಮ ಜಾತಿಗಳ ಜನಸಂಖ್ಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ವರದಿ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.ಆದಾಗ್ಯೂ, ಹೈಕಮಾಂಡ್ ನಿರ್ದೇಶನದಂತೆ ಜಾತಿಗಣತಿ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಸಚಿವರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಹೈಕಮಾಂಡ್ ನಿರ್ದೇಶನದ ಹಿನ್ನೆಲೆ ಸಚಿವರು ವರದಿಗೆ ನೇರವಾಗಿ ವಿರೋಧ ವ್ಯಕ್ತಪಡಿಸದೇ ಹೋದರೂ ಪ್ರಬಲ ಸಮುದಾಯಗಳ ಮುಖಂಡರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರಿಂದ ವರದಿಯನ್ನು ವಿಸ್ತೃತವಾಗಿ ಚರ್ಚಿಸಲು ಅಂಕಿ ಅಂಶಗಳ ಕರಡು ಪ್ರತಿಯನ್ನು ಸಂಪುಟ ಸಚಿವರಿಗೆ ನೀಡಿ, ಅಭಿಪ್ರಾಯ ತಿಳಿಸಲು ಸೂಚಿಸಲಾಗಿತ್ತು.ಕಾಂತರಾಜ್ ವರದಿ ಹತ್ತು ವರ್ಷಗಳ ಹಿಂದಿನ ಅಂಕಿ ಅಂಶ ಒಳಗೊಂಡಿದೆ. ಜಾತಿಗಣತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಿಲ್ಲ ಎಂದು ಆರೋಪಿಸಲಾಗಿತ್ತು.ಹೀಗೆ ವರದಿಗೆ ವಿರೋಧ ಹೆಚ್ಚಿದ್ದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿ ಮರು ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ನಿರ್ದೇಶನ ನೀಡಿದೆ.ವರದಿ ಅಂಗೀಕಾರಕ್ಕೆ ಅಹಿಂದ ವರ್ಗಗಳ ಆಗ್ರಹಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿ ಜಾರಿಗೆ ಅಹಿಂದ ವರ್ಗಗಳು ಈ ಮೊದಲಿನಿಂದಲೂ ಸರ್ಕಾರದ ಮೇಲೆ ಒತ್ತಡ ಹಾಕುತ್ತಲೇ ಬಂದಿವೆ. ಹೀಗಿರುವಾಗ ಎರಡು ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿದು ಮರು ಸಮೀಕ್ಷೆ ನಡೆಸಲು ನಿರ್ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿವೆ. ಈ ಮಧ್ಯೆ ಪ್ರತಿಪಕ್ಷಗಳು ಕೂಡ ಸರ್ಕಾರದ ಮರು ಪರೀಕ್ಷೆ ನಿರ್ಧಾರವನ್ನು ಟೀಕಿಸಿದ್ದು, ಜಾತಿಗಣತಿ ಸಮೀಕ್ಷೆಗೆ ಖರ್ಚು ಮಾಡಿದ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ವಾಗ್ದಾಳಿ ನಡೆಸಿವೆ.ಒಟ್ಟಾರೆ, ಇಂದು ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕುರಿತು ತೀವ್ರ ಚರ್ಚೆ ನಡೆಯಲಿದೆ ಎನ್ನಲಾಗಿದೆ.
2015 ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸಿದ್ಧಪಡಿಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಯನ್ನು ತೆರೆಮರೆಗೆ ಸರಿಸಿರುವ ರಾಜ್ಯ ಸರ್ಕಾರ, ಹೊಸದಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಗುರುವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಹೊಸದಾಗಿ ಸಮೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕಾಂತರಾಜ್ ಸಮೀಕ್ಷೆಯು ಹತ್ತು ವರ್ಷಗಳ ಹಳೆಯ ವರದಿಯಾದ ಕಾರಣ ಹೊಸದಾಗಿ ಸಮೀಕ್ಷೆ ನಡೆಸಿ, ಜಾತಿವಾರು ಜನಸಂಖ್ಯೆ ಹಾಗೂ ಸಾಮಾಜಿಕ, ಶೈಕ್ಷಣಿಕ ಅಂಶಗಳನ್ನು ಕಲೆ ಹಾಕಲು ಸಚಿವ ಸಂಪುಟ ಒಮ್ಮತದ ನಿರ್ಣಯ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮರು ಸಮೀಕ್ಷೆ ನಡೆಸುವ ಕುರಿತು ಚರ್ಚಿಸಲು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮರು ಸಮೀಕ್ಷೆ ಕುರಿತಂತೆ ಸಚಿವರು ಪರ-ವಿರೋಧದ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೊಸ ಸಮೀಕ್ಷೆಗೆ ನಿರ್ಧರಿಸಲಾಗಿದೆ.ಕಾಂತರಾಜ್ ಹಾಗೂ ಜಯ ಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನೇ ಅಂಗೀಕರಿಸಬೇಕು. ಯಾವುದೇ ಕಾರಣಕ್ಕೂ ಮರು ಸಮೀಕ್ಷೆ ಬೇಡ ಎಂದು ಅಹಿಂದ ವರ್ಗಗಳ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳ ಸಚಿವರು ಮರು ಸಮೀಕ್ಷೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿದ್ದರು. ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಕಾಂಗ್ರೆಸ್ ವರಿಷ್ಠರು ಸಾಮಾಜಿಕ ಹಾಗೂ ಶೈಕ್ಷಣಿಕ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಂಡು ದತ್ತಾಂಶಗಳ ಮರು ಸಮೀಕ್ಷೆ ನಡೆಸುವಂತೆ ಸೂಚನೆ ನೀಡಿತ್ತು. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಈಗಾಗಲೇ ಚರ್ಚೆಗೆ ಬಂದಿರುವ ವರದಿಯನ್ನು ಏನು ಮಾಡಬೇಕು, ಯಾವ ರೀತಿಯಲ್ಲಿ ಮರು ಸಮೀಕ್ಷೆ ನಡೆಸಬೇಕು, ಸರ್ಕಾರದ ಮುಂದಿನ ನಡೆ ಹೇಗಿರಬೇಕು ಎಂದು ಎಲ್ಲಾ ಸಚಿವರ ಅಭಿಪ್ರಾಯ ಸಂಗ್ರಹಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.ಪ್ರಬಲ ಸಮುದಾಯಗಳ ಸ್ವಾಗತ2015 ರಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದ ಸಮೀಕ್ಷಾ ವರದಿಯನ್ನು ಪ್ರಬಲ ಸಮುದಾಯಗಳು ವಿರೋಧಿಸಿದ್ದವು.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳನ್ನು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗ ಅಧ್ಯಯನ ಮಾಡಿ ವರದಿ ಸಲ್ಲಿಸಿದ್ದರೂ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ತಮ್ಮ ಜಾತಿಗಳ ಜನಸಂಖ್ಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ವರದಿ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.ಆದಾಗ್ಯೂ, ಹೈಕಮಾಂಡ್ ನಿರ್ದೇಶನದಂತೆ ಜಾತಿಗಣತಿ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಸಚಿವರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಹೈಕಮಾಂಡ್ ನಿರ್ದೇಶನದ ಹಿನ್ನೆಲೆ ಸಚಿವರು ವರದಿಗೆ ನೇರವಾಗಿ ವಿರೋಧ ವ್ಯಕ್ತಪಡಿಸದೇ ಹೋದರೂ ಪ್ರಬಲ ಸಮುದಾಯಗಳ ಮುಖಂಡರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರಿಂದ ವರದಿಯನ್ನು ವಿಸ್ತೃತವಾಗಿ ಚರ್ಚಿಸಲು ಅಂಕಿ ಅಂಶಗಳ ಕರಡು ಪ್ರತಿಯನ್ನು ಸಂಪುಟ ಸಚಿವರಿಗೆ ನೀಡಿ, ಅಭಿಪ್ರಾಯ ತಿಳಿಸಲು ಸೂಚಿಸಲಾಗಿತ್ತು.ಕಾಂತರಾಜ್ ವರದಿ ಹತ್ತು ವರ್ಷಗಳ ಹಿಂದಿನ ಅಂಕಿ ಅಂಶ ಒಳಗೊಂಡಿದೆ. ಜಾತಿಗಣತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಿಲ್ಲ ಎಂದು ಆರೋಪಿಸಲಾಗಿತ್ತು.ಹೀಗೆ ವರದಿಗೆ ವಿರೋಧ ಹೆಚ್ಚಿದ್ದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿ ಮರು ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ನಿರ್ದೇಶನ ನೀಡಿದೆ.ವರದಿ ಅಂಗೀಕಾರಕ್ಕೆ ಅಹಿಂದ ವರ್ಗಗಳ ಆಗ್ರಹಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿ ಜಾರಿಗೆ ಅಹಿಂದ ವರ್ಗಗಳು ಈ ಮೊದಲಿನಿಂದಲೂ ಸರ್ಕಾರದ ಮೇಲೆ ಒತ್ತಡ ಹಾಕುತ್ತಲೇ ಬಂದಿವೆ. ಹೀಗಿರುವಾಗ ಎರಡು ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿದು ಮರು ಸಮೀಕ್ಷೆ ನಡೆಸಲು ನಿರ್ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿವೆ. ಈ ಮಧ್ಯೆ ಪ್ರತಿಪಕ್ಷಗಳು ಕೂಡ ಸರ್ಕಾರದ ಮರು ಪರೀಕ್ಷೆ ನಿರ್ಧಾರವನ್ನು ಟೀಕಿಸಿದ್ದು, ಜಾತಿಗಣತಿ ಸಮೀಕ್ಷೆಗೆ ಖರ್ಚು ಮಾಡಿದ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ವಾಗ್ದಾಳಿ ನಡೆಸಿವೆ.ಒಟ್ಟಾರೆ, ಇಂದು ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕುರಿತು ತೀವ್ರ ಚರ್ಚೆ ನಡೆಯಲಿದೆ ಎನ್ನಲಾಗಿದೆ.