ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯದ ಆದೇಶ ಹೊರಬೀಳುತ್ತಿದ್ದಂತೆ, ಎನ್‌ಐಎ ತನಿಖಾ ತಂಡ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದು, ಸ್ಥಳೀಯ ಪೊಲೀಸರ ನೆರವಿನಿಂದ ಹೊಸ ರೀತಿಯಲ್ಲಿ ತನಿಖೆ ನಡೆಸಲಿದೆ.;

Update: 2025-06-08 11:56 GMT

ಕೊಲೆಯಾಗಿರುವ ಸುಹಾಸ್‌ ಶೆಟ್ಟಿ 

ತಿಂಗಳ ಹಿಂದೆ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಿದೆ. ಬಿಜೆಪಿ ನಾಯಕರ ಒತ್ತಾಯದಂತೆ ಪ್ರಕರಣವನ್ನು ಕೇಂದ್ರ ಸರ್ಕಾರ ತನಿಖೆಗೆ ಒಪ್ಪಿಸಿದೆ.

ಈ ಕೊಲೆ ಪ್ರಕರಣ ಮಂಗಳೂರಿನಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿತ್ತು ಮತ್ತು ಇದರ ಬಳಿಕ ಪ್ರತೀಕಾರದ ಹತ್ಯೆಗಳು ನಡೆದಿವೆ.

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕೈವಾಡವಿದೆ ಎಂದು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ತೀವ್ರವಾಗಿ ಹೋರಾಟ ನಡೆಸಿದ್ದರು. ರಾಜ್ಯದ ತನಿಖಾ ಸಂಸ್ಥೆಗಳ ಮೇಲೆ ವಿಶ್ವಾಸವಿಲ್ಲ, ಪಾರದರ್ಶಕ ತನಿಖೆ ಸಾಧ್ಯವಿಲ್ಲ ಎಂದು ಅವರು ಆರೋಪಿಸಿದ್ದರು. ಪ್ರಮುಖವಾಗಿ, ಮಂಗಳೂರಿನಲ್ಲಿ ಹಿಂದೂ ಮುಖಂಡರನ್ನು ಸರ್ಕಾರವೇ ಗುರಿಯಾಗಿಸುತ್ತಿದೆ ಎಂದು ಆರೋಪಿಸಲಾಗುತ್ತಿದ್ದು,

ಕೇಂದ್ರ ಗೃಹ ಸಚಿವಾಲಯದ ಆದೇಶ ಹೊರಬೀಳುತ್ತಿದ್ದಂತೆ, ಎನ್‌ಐಎ ತನಿಖಾ ತಂಡ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ.

ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ, ಈ ಹತ್ಯೆಯು ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಫಾಜಿಲ್ ಹತ್ಯೆಗೆ ಸೇಡು ತೀರಿಸಿಕೊಳ್ಳಲು ನಡೆದಿದೆ ಎಂದು ವರದಿಗಳು ಹೇಳುತ್ತಿವೆ. ಫಾಜಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿಯನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

Tags:    

Similar News