Mysore Muda Scam | ಹಗರಣ ಮರೆಮಾಚಲು ಕಾಂಗ್ರೆಸ್ ಸಾವರ್ಕರ್‌ ಗುರಿಯಾಗಿಸಿದೆ: ಬಿ.ವೈ ವಿಜಯೇಂದ್ರ

ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟ ದೇಶಭಕ್ತ ವೀರ್ ಸಾವರ್ಕರ್ ಅವರನ್ನು ನಾಚಿಕೆಗೇಡಿನ ರೀತಿಯಲ್ಲಿ ಕಾಂಗ್ರೆಸ್‌ ಗುರಿಯಾಗಿಸಿದೆ. ಇದು ಸ್ವೀಕಾರ್ಹವಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಕಿಡಿ ಕಾರಿದ್ದಾರೆ

Update: 2024-10-04 13:20 GMT
ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ

ಮುಡಾ ಹಗರಣದಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಗುರಿಯಾಗಿಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಶುಕ್ರವಾರ ಆರೋಪಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯನ್ನು ವಿರೋಧಿಸಲಿಲ್ಲ ಎಂದು ಬುಧವಾರ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. 

ಈ ಹೇಳಿಕೆ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ವಿಜಯೇಂದ್ರ, "ಇದು ನಮ್ಮ ರಾಷ್ಟ್ರನಾಯಕರಿಗೆ ಮಾಡಿದ ದ್ರೋಹ! ಅಧಿಕಾರದ ದುರಾಸೆಯಿಂದ ಕಾಂಗ್ರೆಸ್ ಸರ್ಕಾರವು ಕೇವಲ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟ ದೇಶಭಕ್ತ ವೀರ್ ಸಾವರ್ಕರ್ ಅವರನ್ನು ನಾಚಿಕೆಗೇಡಿನ ರೀತಿಯಲ್ಲಿ ಗುರಿಯಾಗಿಸಿದೆ. ಮುಡಾ ಹಗರಣದಲ್ಲಿನ ಅವರ ಭ್ರಷ್ಟಾಚಾರದಿಂದ ಸಾರ್ವಜನಿಕರನ್ನು ದಾರಿತಪ್ಪಿಸುವ ಈ ಹತಾಶ ತಂತ್ರವು ಸ್ವೀಕಾರಾರ್ಹವಲ್ಲ. ಕಾಂಗ್ರೆಸ್‌ನ ಭ್ರಷ್ಟ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ" ಎಂದು ಹೇಳಿದರು.

"ಇದು ಕೇವಲ ಸಾವರ್ಕರ್ ಮೇಲಿನ ದಾಳಿಯಲ್ಲ, ಆದರೆ ನಮ್ಮ ರಾಷ್ಟ್ರ ನಾಯಕರ ತ್ಯಾಗವನ್ನು ಗೌರವಿಸುವ ಪ್ರತಿಯೊಬ್ಬ ಭಾರತೀಯನಿಗೆ ಮಾಡಿದ ಅವಮಾನವಾಗಿದೆ. ವೀರ್ ಸಾವರ್ಕರ್ ಸ್ವತಃ ಹೇಳಿದಂತೆ, 'ಸ್ವಾತಂತ್ರ್ಯವನ್ನು ಎಂದಿಗೂ ನೀಡಲಾಗುವುದಿಲ್ಲ, ಅದನ್ನು ಯಾವಾಗಲೂ ಪಡೆದುಕೊಳ್ಳಬೇಕಾಗುತ್ತದೆ. ಯಾವುದೇ ಸುಳ್ಳು ಅಥವಾ ಗೊಂದಲವು ಸತ್ಯವನ್ನು ಮರೆಮಾಡುವುದಿಲ್ಲ. ನಿಮ್ಮ ಭ್ರಷ್ಟ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೆ ಹೋರಾಡಿ" ಎಂದು ವಿಜಯೇಂದ್ರ ಪೋಸ್ಟ್‌ ಮಾಡಿದ್ದಾರೆ. 

ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27 ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಮುಡಾ ಸೈಟ್‌ಗಳ ಹಂಚಿಕೆ ಅಕ್ರಮದ ಕುರಿತು ಮುಖ್ಯಮಂತ್ರಿ ವಿರುದ್ಧ ಇಡಿ ಪೊಲೀಸರು ಎಫ್‌ಐಆರ್‌ಗೆ ಸಮಾನವಾದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿಯನ್ನು (ಇಸಿಐಆರ್) ದಾಖಲಿಸಿದ್ದಾರೆ.

Tags:    

Similar News