ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರ ದಾರುಣ ಸಾವು
ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಮೃತರು ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ.;
ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ಜನರು ಮೃತಪಟ್ಟಿದ್ದಾರೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63), ಮೈಸೂರಿನ ಸುರೇಶ್ (60), ಹಾಗೂ ಮದನ್ (61) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ 8:30ರ ಸುಮಾರಿಗೆ ಇವರು ಮುಂಡರಗಿಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಮೃತರು ಮೈಸೂರು ಮತ್ತು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ಸಮಯದಲ್ಲಿ ಸುರೇಶ್ ಅವರು ಕಾರು ಚಲಾಯಿಸುತ್ತಿದ್ದರು.
ಧಾರವಾಡ ಜಿಲ್ಲೆಯ ಗದಗ-ಹುಬ್ಬಳ್ಳಿ ರಸ್ತೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 63ರ ಭದ್ರಾಪುರ ಬಳಿ ಈ ಘಟನೆ ನಡೆದಿದೆ. ಅಣ್ಣಿಗೇರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.